ಬೆಳಗಾವಿ – ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ 2019 ನೆ ಸಾಲಿನ ಅಪ್ಪಾಸಾಹೇಬ ಸದರಜೋಶಿ ಹಾಗೂ ಕುಟುಂಬ ದತ್ತಿನಿಧಿ ಪ್ರಶಸ್ತಿ ಡಾ. ಹೇಮಾವತಿ ಸೊನೊಳ್ಳಿ ಅವರಿಗೆ ದೊರಕಿದೆ. ಅವರ ಸ್ಪಂದನ ವೈಚಾರಿಕ ಲೇಖನಗಳ ಕೃತಿಗೆ ಈ ಪ್ರಶಸ್ತಿ ದೊರಕಿದ್ದು, ಡಾ. ಹೇಮಾವತಿ ಸೊನೊಳ್ಳಿ ಅವರು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ಹಾಗೂ ಪೃಥ್ವಿ ಫೌಂಡೇಶನ್ ಅಧ್ಯಕ್ಷರು ಹಾಗೂ ಖಾನಾಪುರ ತಾಲೂಕಿನ ನಂದಗಡದಲ್ಲಿ ಎನ್ ಆರ್ ಇ ಸಂಸ್ಥೆಯ ಮಹಾತ್ಮಾ ಗಾಂಧಿ ಪದವಿ ಪೂರ್ವ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯರು ಡಾ ಹೇಮಾವತಿ ಸೊನೊಳ್ಳಿ ಸಾಹಿತ್ಯಿಕ, ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ವಿವಿಧ ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ ಖಾನಾಪುರ ತಾಲೂಕಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು ವಿವಿಧೆಡೆಯಿಂದ ಸನ್ಮಾನ ಹಾಗೂ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...

