ಸಿಂದಗಿ: ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಂ.ಬಿ ಪಾಟೀಲ್ ಇವರ ಸಾರ್ವಜನಿಕ ಸಂಪರ್ಕಾಧಿಕಾರಿಗಳು, ಶರಣ ಚಿಂತಕರಾದ ಡಾ.ಮಹಾಂತೇಶ ಬಿರಾದಾರ ಹತ್ತು ದಿನಗಳ ಲಂಡನ್ ಪ್ರವಾಸಗೈದು ವಾಪಸಾದ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು.
ಮಹಾಂತೇಶ ಅವರು ಅಲ್ಲಿ ನೆಲೆಸಿರುವ ಭಾರತೀಯರಿಗೆ ಡಿಸೆಂಬರ್ ತಿಂಗಳಲ್ಲಿ ವಿಜಯಪುರ ನಗರದಲ್ಲಿ ನಡೆಯಲಿರುವ ವೃಕ್ಷದಾತ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ, ಲಂಡನಿನಲ್ಲಿ ಕೃಷಿ, ಶಿಕ್ಷಣ, ವೈದ್ಯಕೀಯ ಸೇರಿದಂತೆ ವಿವಿಧ ಬಗೆಯ ಅಧ್ಯಯನ ಯಶಸ್ವಿಯಾಗಿ ಮುಗಿಸಿ ಮರಳಿ ವಿಜಯಪುರ ಜಿಲ್ಲೆಗೆ ಆಗಮಿಸಿದ್ದಾರೆ.
ತಾಲ್ಲೂಕಿನ ಬೋರಗಿ ಗ್ರಾಮದ ನಬಿರೋಶನ ಪ್ರಕಾಶನ ವತಿಯಿಂದ ಆರಕ್ಷಕ ಮೌಲಾಲಿ ಆಲಗೂರ ಡಾ. ಮಹಾಂತೇಶ ಅವರನ್ನು ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ಆರಕ್ಷಕರಾದ ಮಹೇಶ ಕೋಟಾರಗಸ್ತಿ, ತುಕಾರಾಮ ಬಾಲವ್ವಗೋಳ, ಅಂಬರೀಶ್ ನಾಗಾವಿ, ಪ್ರಥಮ ದರ್ಜೆ ಗುತ್ತಿಗೆದಾರರದ ಹಣಮಂತ ಚಿಂಚಲಿ ಜೊತೆಗಿದ್ದರು.

