- Advertisement -
ಸಿಂದಗಿ: ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ ಜೀವನ ಮಿಶನ್ ಯೋಜನೆಯಡಿ ಗ್ರಾಮದ ಪ್ರತಿಯೊಂದೂ ‘ ಮನೆ ಮನೆಗೆ ನೀರು ‘ ಅನ್ನುವ ನಳ ಅಳವಡಿಸುವ ಪೈಪಲೈನ ಕಾಮಗಾರಿಗೆ ಸಂಸದ ರಮೇಶ ಜಿಗಜಿಣಗಿ ಅವರು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಮಾಜಿ ಶಾಸಕ ರಮೇಶ ಭೂಸನೂರ, ಗ್ರಾಮ ಪಂಚಾಯತಿ ಅಧ್ಯಕ್ಷ ಪೈಗಂಬರ ಮುಲ್ಲಾ, ಶಂಕರ ಬಗಲಿ, ರಮೇಶ ಚಿನ್ನಾಕರ, ನಿಂಗಣ್ಣ ಪ್ರಭುಗೋಳ, ಶಂಕ್ರಯ್ಯ ಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.