ಮೈಸೂರು – ಕರ್ನಾಟಕ ಪ್ರದೇಶ ಸಮಿತಿ ಕಿಸಾನ್ ಘಟಕದ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಗ್ರಾಮಾಂತರ ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷರನ್ನಾಗಿ ದ್ಯಾವಪ್ಪನಾಯಕ ಅವರನ್ನು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಅವರನ್ನು ನೇಮಕ ಮಾಡಿ ಆದೇಶ ಕೆಪಿಸಿಸಿ ಕಿಸಾನ ಕಾಂಗ್ರೆಸ್ ಆದೇಶ ಹೊರಡಿಸಿದೆ.
ತಮಗೆ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಹಾಗೂ ಕಿಸಾನ್ ಘಟಕದ ಮೂಲಕ ರೈತರನ್ನು ಪಕ್ಷದಲ್ಲಿ ಸಂಘಟಿಸಲು ಶ್ರಮಿಸಬೇಕೆಂದು ಆದೇಶ ಪತ್ರದಲ್ಲಿ ಕೋರಿದೆ.
ಈ ನಿಟ್ಟಿನಲ್ಲಿ ತಾವುಗಳು ಕೂಡಲೇ ಜಿಲ್ಲೆಯ ಮುಖಂಡರುಗಳ ಸಹಕಾರದೊಂದಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ರಾಜ್ಯಾಧ್ಯಕ್ಷರಾದ ಸಚಿನ್ ಮೀಗಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.