- Advertisement -
ಸಿಂದಗಿ: ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಕಡಿಮೆ ತೂಕವಿರುವ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆಯನ್ನು ವಿತರಿಸಬೇಕು ಎನ್ನುವ ಸರಕಾರದ ಆದೇಶದಂತೆ ವಿತರಣೆ ಮಾಡಲಾಗುತ್ತದೆ ಎಂದು ಮುಖ್ಯಗುರುಮಾತೆ ವಿಜಯಲಕ್ಷ್ಮೀ ರೆಬಿನಾಳ ಹೇಳಿದರು.
ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡಿ ಮಾತನಾಡಿದರು.
ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡಿ, ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಹಾಗೂ ವಿಜಯಪುರ ಜಿಲ್ಲೆಸೇರಿ ರಾಜ್ಯದಲ್ಲಿ 7 ಜಿಲ್ಲೆಗಳಲ್ಲಿ ಕಡಿಮೆ ತೂಕವಿರುವ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ಇಲ್ಲವೆ ಬಾಳೆಹಣ್ಣು ವಿತರಣೆಯನ್ನು ಡಿ.1 ರಿಂದಲೆ ಆರಂಭ ಮಾಡಲಾಗಿದೆ ಎಂದರು.
- Advertisement -
ಈ ಸಂದರ್ಭದಲ್ಲಿ ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರು ಸೇರಿದಂತೆ ಇದ್ದರು.