spot_img
spot_img

ಸಸಿ ನೆಟ್ಟು ಪರಿಸರ ದಿನ ಆಚರಣೆ

Must Read

- Advertisement -

ಹುನಗುಂದ: ತಾಲೂಕಿನ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಈ ವರ್ಷ ಶಾಲಾ ಆವರಣದಲ್ಲಿ ಹತ್ತು ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನು ಆಯ್ದ ಮಕ್ಕಳಿಗೆ ನೀಡಿ ಮಾರ್ಗದರ್ಶನ ನೀಡಲಾಯಿತು.

ಈ ಸಂದರ್ಭದಲ್ಲಿ ಮುಖ್ಯಗುರು ಎಂ.ಜಿ. ಬಡಿಗೇರ ಮಾತನಾಡುತ್ತಾ, ಬಯಲು ಸೀಮೆಯ ನಮ್ಮ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆ. ಚಲಿಸುವ ಮೋಡಗಳನ್ನು ತಡೆದು ಮಳೆಯನ್ನು ಬರಿಸಲು ಕಾಡು, ಗಿಡ-ಮರ ಬಹಳ ಅವಶ್ಯಕ. ಆದ್ದರಿಂದ ಗಿಡ ನೆಟ್ಟು ಪರಿಸರವನ್ನು ಹಸಿರುಮಯಗೊಳಿಸಬೇಕು ಎಂದರು.

- Advertisement -

ಇನ್ನೋರ್ವ ಶಿಕ್ಷಕ ಮಹಾಂತೇಶ ವಂದಾಲಿ ಮಾತನಾಡುತ್ತಾ, ಮಕ್ಕಳು ತಮ್ಮ ಜನ್ಮದಿನವನ್ನು ಕೇಕ್ ಕತ್ತರಿಸಿ ಆಚರಿಸುವುದರ ಜೊತೆಗೆ ಪ್ರತಿವರ್ಷ ಒಂದೊಂದು ಗಿಡ ನೆಟ್ಟು ನಮ್ಮ ಪರಿಸರಕ್ಕೆ ಪೂರಕವಾಗಿ ಆಚರಿಸಬೇಕು ಎಂದು ಕರೆಕೊಟ್ಟರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಅಶೋಕ ಬಳ್ಳಾ, ಸುಭಾಸ್ ಕಣಗಿ, ಎಸ್ ಎಸ್ ಲಾಯದಗುಂದಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ವಿದ್ಯಾರ್ಥಿ ಜೀವನದ ನಿಜವಾದ ಕೌಶಲ ಆಲಿಸುವಿಕೆ – ನಟ ಮಾಸ್ಟರ್ ಮಂಜುನಾಥ ಅಭಿಮತ

ವಿದ್ಯಾರ್ಥಿ ಜೀವನದಲ್ಲಿ ಕೇಳುವಿಕೆ ಹಾಗೂ ಅರ್ಥಮಾಡಿಕೊಳ್ಳುವಿಕೆಯು ನಿಜವಾದ ಕೌಶಲ್ಯವಾಗಿದೆ ಎಂದು ಕನ್ನಡದ ಪ್ರಸಿದ್ಧ ನಟ ಮಾಸ್ಟರ್ ಮಂಜುನಾಥ ಅಭಿಪ್ರಾಯಪಟ್ಟರು. ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜಿನ ಸಮಾಜ ವಿಜ್ಞಾನ...
- Advertisement -

More Articles Like This

- Advertisement -
close
error: Content is protected !!
Join WhatsApp Group