ಪರಿಸರ ಕವನ

Must Read

ನಮ್ಮುಸಿರನುಳಿಸಿ

ಆಲದ ಮರನೆಟ್ಟ ಕಾಲವೆ ಗತಿಸ್ಯಾವ
ಮೇಲಾದ ನೆರಳ ನೀಡ್ಯಾದ //ಕೇಳಿರಿ
ಸಾಲಿಯ ಮಕ್ಕಳ ಹಾಡೊಂದ//ಪ//

ಉಸಿರಿನ ದ್ಯಾವರು ಹಸಿರಾಗ ಬೆರೆತಾನ
ಕೆಸರು ಕೈಗಿಂದು ನೀಡ್ಯಾನ // ಕೇಳಿರಿ
ಮೊಸರನ್ನ ತಿನ್ನೋ ಭಾಗ್ಯವ//1//

ಮಳೆರಾಯ ಬಂದಾನ ಹೊಳೆಯಾಗಿ ಹರಿದಾನ
ಕಳೆದಾನ ಬಿಸಿಲ ಬೇಗೆಯ// ಕೇಳಿರಿ
ಕೊಳೆಯ ಮಾಡ್ಬೇಡಿ ಹೊಳೆಯನ್ನ//2//

ಕಾಡು ಬೆಳೆಸ್ಯಾರಲ್ಲ ನಾಡಿನ ಹಿರಿಯಾರು
ಮೋಡ ಮಣ್ಣನು ಕಟ್ಟಾಕ// ಕೇಳಿರಿ
ಬಾಡ್ಯಾವ ಕಾಡ ಹಸಿರುಸಿರ//3//


ಶ್ರೀಮತಿ ಬಸಮ್ಮ ಏಗನಗೌಡ್ರ
(ವಿಶ್ವ ಪರಿಸರ ದಿನಾಚರಣೆ ಶುಭಾಶಯಗಳೊಂದಿಗೆ)

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group