ನಮ್ಮುಸಿರನುಳಿಸಿ
ಆಲದ ಮರನೆಟ್ಟ ಕಾಲವೆ ಗತಿಸ್ಯಾವ
ಮೇಲಾದ ನೆರಳ ನೀಡ್ಯಾದ //ಕೇಳಿರಿ
ಸಾಲಿಯ ಮಕ್ಕಳ ಹಾಡೊಂದ//ಪ//
ಉಸಿರಿನ ದ್ಯಾವರು ಹಸಿರಾಗ ಬೆರೆತಾನ
ಕೆಸರು ಕೈಗಿಂದು ನೀಡ್ಯಾನ // ಕೇಳಿರಿ
ಮೊಸರನ್ನ ತಿನ್ನೋ ಭಾಗ್ಯವ//1//
ಮಳೆರಾಯ ಬಂದಾನ ಹೊಳೆಯಾಗಿ ಹರಿದಾನ
ಕಳೆದಾನ ಬಿಸಿಲ ಬೇಗೆಯ// ಕೇಳಿರಿ
ಕೊಳೆಯ ಮಾಡ್ಬೇಡಿ ಹೊಳೆಯನ್ನ//2//
ಕಾಡು ಬೆಳೆಸ್ಯಾರಲ್ಲ ನಾಡಿನ ಹಿರಿಯಾರು
ಮೋಡ ಮಣ್ಣನು ಕಟ್ಟಾಕ// ಕೇಳಿರಿ
ಬಾಡ್ಯಾವ ಕಾಡ ಹಸಿರುಸಿರ//3//
ಶ್ರೀಮತಿ ಬಸಮ್ಮ ಏಗನಗೌಡ್ರ
(ವಿಶ್ವ ಪರಿಸರ ದಿನಾಚರಣೆ ಶುಭಾಶಯಗಳೊಂದಿಗೆ)