- Advertisement -
ನವದೆಹಲಿಯ ಚಾಣಕ್ಯಪುರಿಯ ಪಿವಿಆರ್ ಥಿಯೇಟರ್ನಲ್ಲಿ, ಕನ್ನಡದ “ವಿಕ್ರಾಂತ್ ರೋಣ” ಚಲನಚಿತ್ರದ ಪ್ರೀಮಿಯರ್ ಶೋ ಅನ್ನು ರಾಜ್ಯ ಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ವೀಕ್ಷಿಸಿದರು.
ಅವರ ಜೊತೆಗೆ ಅಭಿನಯ ಚಕ್ರವರ್ತಿ, ನಾಡಿನ ಹೆಮ್ಮೆಯ ನಟ ಕಿಚ್ಚ ಸುದೀಪ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ ಜೋಶಿ ಇದ್ದರು.
ನಮ್ಮ ಮಾತೃಭಾಷೆ ಕನ್ನಡದ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಯಾಗಿರುವುದು ಸಂತಸದ ಸಂಗತಿ. ಈ ಸಿನಿಮಾ ಯಶಸ್ಸು ಕಾಣಲಿ ಎಂದು ಶುಭ ಹಾರೈಸುತ್ತೇನೆ ಎಂದು ಈರಣ್ಣ ಕಡಾಡಿ ಶುಭ ಹಾರೈಸಿದರು.