ಸಿಂದಗಿ: ಹಿಂದಿನ ಕಾಲದಲ್ಲಿ ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿತು. ಹೆಣ್ಣು ಮಕ್ಕಳಿಗೇಕೆ ಶಿಕ್ಷಣ ಎನ್ನುವ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳು ಶಿಕ್ಷಣ ಕಲಿತರೆ ಶಾಲೆಯೇ ತೆರೆದಂತೆ ಎಂಬ ಮಾತಿಗೆ ಮುಂಚೂಣಿಯಲ್ಲಿದ್ದಾರೆ ಸರಕಾರವು ಕೂಡ ಬೇಟಿ ಪಢಾವೋ ಬೇಟಿ ಬಚಾವೋ ಕಾರ್ಯಕ್ರಮದ ಮೂಲಕ ಹೆಣ್ಣು ಮಕ್ಕಳನ್ನು ಶೈಕ್ಷಣಿಕವಾಗಿ ಮೇಲೆತ್ತುತ್ತಿದೆ ಅದಕ್ಕಾಗಿ ಸರಕಾರದ ಜೊತೆ ಪ್ರತಿಯೊಬ್ಬರು ಕೈ ಜೋಡಿಸಿದ್ದಾಗ ಮಾತ್ರ ಶೈಕ್ಷಣಿಕ ಮಟ್ಟ ಹೆಚ್ಚಿಸಲು ಸಾಧ್ಯ ಎಂದು ಭೌತಶಾಸ್ತ್ರ ಉಪನ್ಯಾಸಕ ಬಸನಗೌಡ ಬಿರಾದಾರ ಹೇಳಿದರು.
ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀಮತಿ ಭಾಗೀರಥಿಬಾಯಿ ನೀಲಪ್ಪಗೌಡ ಬಿರಾದಾರ ಅವರ ಸ್ಮರಣಾರ್ಥ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸ್ವಂತ ಖರ್ಚಿನಲ್ಲಿ ಉಚಿತವಾಗಿ ಭೌತಶಾಸ್ತ್ರ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.
ಜಿ.ಎಸ್. ಮೋರಟಗಿ, ಸಿರಾಜುದ್ದಿನ ಶೇಖ ಮಾತನಾಡಿ, ಶಿಕ್ಷಣ ಪ್ರಗತಿಯ ಸಂಕೇತ ಆದರೆ ಹಿಂದೆಲ್ಲಾ ಎಲ್ಲರಿಗೂ ಶಿಕ್ಷಣ ಪಡೆಯುವ ಅವಕಾಶ ಇರಲಿಲ್ಲ. ಹೆಣ್ಣು ಮಕ್ಕಳನ್ನು ಶಾಲೆಗೆ ಯಾಕೆ ಕಳುಹಿಸಬೇಕು ಎನ್ನುವ ಕಾಲಘಟ್ಟವೂ ಇತ್ತು. ಸಾಮಾಜಿಕ ಬದಲಾವಣೆಯಿಂದಾಗಿ ಇಂದು ಪ್ರತಿಯೊಬ್ಬರಿಗೂ ವಿದ್ಯಾಭ್ಯಾಸ ಪಡೆಯುವ ಅವಕಾಶ ಸಿಕ್ಕಿದೆ ಅದಕ್ಕಾಗಿ ಪ್ರಗತಿಪರ ಚಿಂತನೆ ನಮ್ಮದಾಗಬೇಕು. 100 ಪುಸ್ತಗಳನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಇದನ್ನು ಎಲ್ಲ ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಂಡು ದ್ವಿತೀಯ ಪಿಯುಸಿಯ ಫಲಿತಾಂಶವನ್ನು ಹೆಚ್ಚಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಎನ್. ಆರ್.ಗಂಗನಳ್ಳಿ ಮಾತನಾಡಿ, ಶಿಕ್ಷಣವೇ ದೇಶದ ಶಕ್ತಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವತ್ತ ಹೆಚ್ಚಿನ ಗಮನ ನೀಡಬೇಕು, ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಹಿನ್ನಡೆ ಆಗಬಾರದು ಶಿಕ್ಷಕರು ಮತ್ತು ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು, ಇಂದಿನ ವಿದ್ಯಾರ್ಥಿಗಳು ದೇಶದ ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು. ಅವರ ತಾಯಿಯವರ ಸ್ಮರಣಾರ್ಥವಾಗಿ ಉಚಿತ ಪುಸ್ತಕಗಳನ್ನು ನೀಡುತ್ತಿರುವ ಕಾರ್ಯ ಶ್ಲಾಘನೀಯವಾದದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡು ಸರಿಯಾಗಿ ಅಧ್ಯಯನ ಮಾಡಿ ನಿಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಉಪನ್ಯಾಸಕ ಬಸನಗೌಡ ಬಿರಾದಾರ ಸ್ವಾಗತಿಸಿದರು. ಎಂ.ಕೆ.ಹಿಪ್ಪರಗಿ ನಿರೂಪಿಸಿದರು. ಅನಿಲಕುಮಾರ ರಜಪೂತ ವಂದಿಸಿದರು.
ಇದೇಸಂದರ್ಭದಲ್ಲಿಕಾಲೇಜಿನಉಪನ್ಯಾಸಕರಾದ ಎಸ್ಎಸ್ ಮೋರಟಗಿ, ಎಸ್ಎಸ ಸುರಪುರ, ಕಿಶನರಾವ ಕುಲಕರ್ಣಿ, ರಾಘವೇಂದ್ರ ಭಜಂತ್ರಿ ಸೇರಿದಂತೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.