ಮೀಸಲಾತಿ ಅವಧಿ ವಿಸ್ತರಣೆ

Must Read

ಮೂಡಲಗಿ: ಆಲಮಟ್ಟಿ ಮುಳುಗಡೆ ಸಂತ್ರಸ್ತರ ಕುಟುಂಬದ ಅರ್ಹ ಸದಸ್ಯರಿಗೆ ಸರಕಾರಿ ಉದ್ಯೋಗ ಹಾಗೂ ಶಿಕ್ಷಣಕ್ಕೆ ನಿಗದಿ ಪಡಿಸಿದ ಮೀಸಲಾತಿ ಸೌಲಭ್ಯ ಅವಧಿಯನ್ನು ಮತ್ತೆ 25 ವರ್ಷ ಮುಂದುವರಿಸಲು ಒಪ್ಪಿ ಸರಕಾರ ಪ್ರಕಟಣೆ ಹೊರಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ಆರ್ ನಿರಾಣಿ ತಿಳಿಸಿದ್ದಾರೆ.

ಸರಕಾರವು ಇದೇ 7 ರಂದು ಪ್ರಕಟಣೆ ನೀಡಿ ದಿನಾಂಕ 23/11/2020 ರಿಂದ ಪೂರ್ವಾನ್ವಯವಾಗುವಂತೆ ಅವಧಿ ವಿಸ್ತರಿಸಿ ಪ್ರಕಟಣೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಹರ್ಷ: ಸಂತ್ರಸ್ತರ ಮೀಸಲಾತಿ ಸೌಲಭ್ಯ ಮತ್ತೆ 25 ವರ್ಷ ಮುಂದುವರಿಸಿದ್ದಕ್ಕೆ ಆಲಮಟ್ಟಿ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ಅಧ್ಯಕ್ಷ ಅದೃಶ್ಯಪ್ಪ ದೇಸಾಯಿ ಅವರು ಹರ್ಷ ವ್ಯಕ್ತಪಡಿಸಿ ಇದರಿಂದಾಗಿ ಬಾಗಲಕೋಟ, ಬೆಳಗಾವಿ, ವಿಜಯಪೂರ ಜಿಲ್ಲೆಗಳ ಸಾವಿರಾರು ಕುಟುಂಬಗಳಿಗೆ ನೆರವಾಗಲಿದೆ.

ಈ ಅವಧಿ ಮುಂದುವರಿಸಲು ಪ್ರಯತ್ನಿಸಿದ ವಿಧಾನ ಪರಿಷತ್ ಸದಸ್ಯ ಹಣಮಂತ ಆರ್. ನಿರಾಣಿ ಅವರನ್ನು ಅಭಿನಂದಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group