- Advertisement -
ಬೀದರ – ಗಡಿ ಜಿಲ್ಲೆ ಬೀದರ್ ನ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುನಾಥ ಅಣ್ಣೆಪ್ಪ ಗಾಮಾ (52) ಮೃತ ರೈತ.
ಇವರು ಕೃಷಿ ಚಟುವಟಿಕೆಗಳಿಗಾಗಿ ಎಸ್.ಬಿ.ಐ ಬ್ಯಾಂಕ್ ನಲ್ಲಿ ರೂ 3 ಲಕ್ಷ, ಕೆಜಿಬಿ ಬ್ಯಾಂಕ್ ನಲ್ಲಿ ರೂ 1.20 ಲಕ್ಷ ಹಾಗೂ ಡಿಸಿಸಿ ಬ್ಯಾಂಕ್ ನಲ್ಲಿ ರೂ 1 ಲಕ್ಷ ಸೇರಿದಂತೆ ಖಾಸಗಿ ಹಣಕಾಸು ಸಂಸ್ಥೆಯಿಂದ ಸಾಲ ಪಡೆದಿದ್ದರು.
- Advertisement -
ಅದನ್ನು ತೀರಿಸುವ ಕುರಿತು ಯೋಚನೆ ಮಾಡುತ್ತಿದ್ದರು. ಇದರಿಂದ ಜಿಗುಪ್ಸೆಗೊಂಡು ತಮ್ಮ ಹೊಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪತ್ನಿ ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.