ವ್ಯವಸಾಯ ಸೇವಾ ಸಂಘಗಳಿಗೆ ರೈತರೆ ಜೀವಾಳ

Must Read

ಸಿಂದಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಬೆಳೆಯಲು ರೈತರ ಸಹಕಾರ ಮುಖ್ಯ ಹಾಗೂ ಸಂಘಕ್ಕೆ ರೈತರೇ ಜೀವಾಳ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶರಣಪ್ಪ ಕಣಮೇಶ್ವರ ಹೇಳಿದರು.

ತಾಲೂಕಿನ ದೇವಣಗಾಂವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ದೇವಣಗಾಂವ ಸುತ್ತಲಿನ ಗ್ರಾಮಗಳ ಜನರ ಅನುಕೂಲಕ್ಕಾಗಿ ಗ್ರಾಮದಲ್ಲಿ ನೂತನ ಪಿಎಲ್‍ಡಿ ಬ್ಯಾಂಕ್ ಶಾಖೆ ತೆರೆಯಬೇಕೆಂದು ಜಿಲ್ಲಾಧ್ಯಕ್ಷರಾದ ಶಿವಾನಂದ ಪಾಟೀಲರಿಗೆ ಒತ್ತಾಯಿಸಲಾಗಿದೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಕೆವಿಜಿಬಿ ಬ್ಯಾಂಕ್ ವ್ಯವಸ್ಥಾಪಕ ಅಸ್ಮತ ಚಿನ್ನಕೋಟಿ ಮಾತನಾಡಿ, ರೈತರು ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ಸಾಲ ತಗೆದು ಕೊಂಡು ಅಷ್ಟೆ ಜವಾಬ್ದಾರಿಯಿಂದ ಮರುಪಾವತಿ ಮಾಡಬೇಕು ಅಂದಾಗ ಬ್ಯಾಂಕ್ ಮತ್ತು ಸಂಘಗಳು ಬೆಳವಣಿಗೆ ಹೊಂದಲು ಸಾಧ್ಯ ಎಂದು ತಿಳಿಸಿದರು

ಸಾನ್ನಿಧ್ಯ ಹಿರಿಯರಾದ ವೇ.ಈರಯ್ಯ ಮಠ, ಜಿಪಂ ಮಾಜಿ ಸದಸ್ಯ ಸಂಘದ ಉಪಾಧ್ಯಕ್ಷ ಕಾಶಿನಾಥ ಗಂಗನಳ್ಳಿ, ಈರಣ್ಣ ಕಲಶೆಟ್ಟಿ, ಶಂಕರಲಿಂಗ ಕಡ್ಲೇವಾಡ, ಸಿದ್ದಾರಾಮ ಹಂಗರಗಿ, ಗಾಲೀಬ ಸೋಮನಾಯಕ, ರವೀಂದ್ರ ಕಲಶೆಟ್ಟಿ, ಸಾಯಬಣ್ಣ ನಾಗಠಾಣ, ಬಸಪ್ಪ ದಾನೇನವರ, ಶ್ರೀದೇವಿ ಗಂಗನಳ್ಳಿ, ಅನ್ನಪೂರ್ಣ ಕುಂಬಾರ ಸಿಇಓ ಮಂಜುಳಾ ಬಿರಾದಾರ, ಗ್ರಾಪಂ ಅಧ್ಯಕ್ಷ ಬಸವರಾಜ ಹೀರಾಪೂರ, ಯಲ್ಲಪ್ಪ ತಳವಾರ, ಮುತ್ತು ಕಲಶೆಟ್ಟಿ ಹಾಗೂ ಸಿಬ್ಬಂದಿ ಇದ್ದರು.

Latest News

ಸಂಘಗಳಿಂದ ರೈತರ ಹೋರಾಟಕ್ಕೆ ಬೆಂಬಲ ಘೋಷಣೆ

ಹಳ್ಳೂರ- ಗ್ರಾಮದ ಶ್ರೀ ಬಸವೇಶ್ವರ ವೃತ್ತದಲ್ಲಿ ಹಳ್ಳೂರ, ಹಾಗೂ ಶಿವಾಪೂರ ಗ್ರಾಮದ ಸಹಕಾರಿ ಸಂಘ ಹಾಗೂ ಬ್ಯಾಂಕುಗಳ ಸಿಬ್ಬಂದಿಗಳು ಸ್ವಯಂ ಪ್ರೇರಿತವಾಗಿ ಒಂದು ದಿನ ಸಹಕಾರಿ,...

More Articles Like This

error: Content is protected !!
Join WhatsApp Group