- Advertisement -
ಬೀದರ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ವಿಕ್ರಮ್ ಜಾಲಿಂದರ್ ಬಿರಾದಾರ (32), ಸಂಗಮೇಶ (6), ದರ್ಶನ (8), ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಲಂಜವಾಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಆರ್ಥಿಕ ಸಂಕಷ್ಟ ಹಾಗೂ ಕೌಟುಂಬಿಕ ಕಲಹ ಹಿನ್ನೆಲೆ ಜಮೀನಿನಲ್ಲಿ ತನ್ನ ಮಕ್ಕಳೊಂದಿಗೆ ತಂದೆ ಆತ್ಮಹತ್ಯೆಗೆ ಶರಣಾಗಿದ್ದಾನೆ.
- Advertisement -
ವಿಕ್ರಮ ಖಾಸಗಿ ಸಾಲ ಮಾಡಿ ರಾಶಿ ಯಂತ್ರ ಖರೀದಿಸಿದ್ದ ಇದರಲ್ಲಿ ಆರ್ಥಿಕ ಹಿನ್ನಡೆಯಾಗಿತ್ತು.ಈ ವಿಷಯಕ್ಕೆ ಮನೆಯಲ್ಲಿ ಗಲಾಟೆ ಮಾಡಿಕೊಂಡು ಮಕ್ಕಳನ್ನು ಕರೆದುಕೊಂಡು ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾನೆನ್ನಲಾಗಿದೆ.
ಈ ಕುರಿತು ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶವಗಳನ್ನು ಭಾವಿಯಿಂದ ಹೊರತೆಗೆದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ನಂದಕುಮಾರ ಕರಂಜೆ, ಬೀದರ