- Advertisement -
ಮೂಡಲಗಿ: ಪಟ್ಟಣದ ಶ್ರೀ ಸತ್ಯಸಾಯಿ ಸೇವಾ ಸಮಿತಿ ಆಶ್ರಯದಲ್ಲಿ ಯುಗಾವತಾರಿ ಭಗವಾನ ಶ್ರೀ ಸತ್ಯ ಸಾಯಿಬಾಬಾರವರ ಪರಮಪಾವನ ಸಾನ್ನಿಧ್ಯದಲ್ಲಿ 17ನೇ ವಾರ್ಷಿಕೋತ್ಸವ ಸಮಾರಂಭವು ಫೆ.11 ರಂದು ಆರ್ಡಿಎಸ್ ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ಬೆಳಿಗ್ಗೆ 10-30 ಗಂಟೆಗೆ ಜರುಗಲಿದೆ ಎಂದು ಸೇವಾ ಸಮಿತಿ ತಿಳಿಸಿದೆ.
ಸಮಾರಂಭದ ಸಾನ್ನಿಧ್ಯವನ್ನು ಪಟ್ಟಣದ ಸಿದ್ದ ಸಂಸ್ಥಾನ ಮಠದ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು, ಶ್ರೀ ಶ್ರೀಧರಬೋಧ ಸ್ವಾಮಿಗಳು, ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಶ್ರೀ ಶಿವಾನಂದ ಸ್ವಾಮಿಗಳು ವಹಿಸುವರು.
ರಾಜ್ಯ ಸಂಪನ್ಮೂಲ ವ್ಯಕ್ತಿ ಬೆಳಗಾವಿ ವಿಭಾಗದ ಸುರೇಶ ಕಬ್ಬೂರ ಅಧ್ಯಕ್ಷತೆ ವಹಿಸುವರು. ಶ್ರೀ ಸತ್ಯಸಾಯಿ ಸೇವಾ ಸಮಿತಿ ಬೆಳಗಾವಿ ಜಿಲ್ಲಾಧ್ಯಕ್ಷ ವಸಂತ ಬಾಳಿಗಾ, ವಿಕ್ರಮ ಮುರಳಿ, ಲೋಹಿತ ಕಲಾಲ, ಸಂತೋಷ ಪಾರ್ಶಿ, ಅಜಿತ ಮನ್ನಿಕೇರಿ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ತಿಳಿಸಿದ್ದಾರೆ.