Homeಸುದ್ದಿಗಳುಜಿಲ್ಲಾಧಿಕಾರಿಗಳಿಗೆ ಸನ್ಮಾನ- ಸರ್ವ ಕಲಾವಿದರ ಪೂರ್ವಭಾವಿ ಸಭೆ 21 ರಂದು

ಜಿಲ್ಲಾಧಿಕಾರಿಗಳಿಗೆ ಸನ್ಮಾನ- ಸರ್ವ ಕಲಾವಿದರ ಪೂರ್ವಭಾವಿ ಸಭೆ 21 ರಂದು

ಬಾಗಲಕೋಟೆ -ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಮನ್ನಿಹಾಳ ಗ್ರಾಮದ ಐ.ಎ.ಎಸ್. ಅಧಿಕಾರಿ ಎಂ ಸಂಗಪ್ಪ ಅವರು ಬಾಗಲಕೋಟೆ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಗಳಾಗಿ ನಿಯುಕ್ತಿಗೊಂಡಿದ್ದಾರೆ. ಅವರನ್ನು ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟದಿಂದ ಸೋಮವಾರ 23ರಂದು ಜಿಲ್ಲೆಯ ಎಲ್ಲ ಕಲಾವಿದರು ಸೇರಿ ಅವರನ್ನು ವಿಶೇಷವಾಗಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿಣಿ ಪವಿತ್ರ ಜಕ್ಕಪ್ಪನವರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪತ್ರಿಕೆಯೊಂದಿಗೆ ಮಾತನಾಡುತ್ತ ಪೂರ್ವಭಾವಿಯಾಗಿ ಚರ್ಚಿಸಲು ಶನಿವಾರ ‌21 ರಂದು ಮಧ್ಯಾಹ್ನ 1.ಗಂಟೆಗೆ ಗದ್ದನಕೇರಿಯ ಲಡ್ಡು ಮುತ್ಯಾ ದೇವಸ್ಥಾನದಲ್ಲಿ ಸಭೆಯನ್ನು ಕರೆಯಲಾಗಿದೆ ಕಲಾವಿದರೆಲ್ಲರೂ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಕೋರಿದ್ದಾರೆ.

ಒಕ್ಕೂಟದ ಮುಖಂಡರಾದ ಯಲ್ಲಪ್ಪ ಪೂಜಾರ,  ಈಶ್ವರಪ್ಪ ಹೊರಟ್ಟಿ ಉಪಸ್ಥಿತರಿದ್ದರು

RELATED ARTICLES

Most Popular

error: Content is protected !!
Join WhatsApp Group