Homeಸುದ್ದಿಗಳುಉದ್ದಿಮೆದಾರರಿಗೆ ಸನ್ಮಾನ

ಉದ್ದಿಮೆದಾರರಿಗೆ ಸನ್ಮಾನ

ಸಿಂದಗಿ; ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ್ ರವರು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಸಂಸ್ಥೆಯಲ್ಲಿ ತರಬೇತಿ ಪಡೆದು ಯಶಸ್ವಿ ಉದ್ಯಮದಾರರಾದ ಸಿದ್ದಲಿಂಗ ಕಾ. ಬಡಿಗೇರ (ಗುಂದಗಿ) ಅವರಿಗೆ ನೆನಪಿನ ಕಾಣಿಕೆ ನೀಡಿ, ಶ್ರೀಮತಿ ಶಿಲ್ಪಾ ಆನಂದ ಕಂಠಿ ಗುಡಾಂಬೆ ಅಗರಬತ್ತಿ ವರ್ಕ್ಸ್ ವಿಜಯಪುರ ರವರನ್ನ ಯಶಸ್ವಿ ಉದ್ಯಮದಾರರೆಂದು ಪರಿಗಣಿಸಿ ಸನ್ಮಾನಿಸಲಾಯಿತು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ, ಸಿಡಾಕ್ ಜಂಟಿ ನಿರ್ದೇಶಕಿ ಸುಪ್ರೀತಾ ಬ. ಬಳ್ಳಾರಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ. ಬಿ. ಕುಂಬಾರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷರು ಹಾಗೂ ಇನ್ನಿತರೆ ಇಲಾಖೆಯ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

RELATED ARTICLES

Most Popular

error: Content is protected !!
Join WhatsApp Group