ಫೆ.13 ರಂದು ಜಾನಪದ ಸಂಗೀತ ಉತ್ಸವ – ಕೂಚಬಾಳ

Must Read

ಸಿಂದಗಿ: ತಾಲೂಕಿನ ಯರಗಲ್ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ವಿಜಯಪುರ ಇವುಗಳ ಸಹಯೋಗದಲ್ಲಿ ಫೇ 13 ರಂದು ಸಾಯಂಕಾಲ 7 ಗಂಟೆಗೆ ಜಾನಪದ ಸಂಗೀತ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ರಾಜಶೇಖರ ಕೂಚಬಾಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂದು ಸಾಯಂಕಾಲ ನಡೆಯುವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ನೆಲೋಗಿ ವಿರಕ್ತ ಮಠದ ಪೂಜ್ಯಶ್ರೀ ಜಗದ್ಗುರು ಸಿದ್ದಲಿಂಗ ಸ್ವಾಮಿಗಳು, ಸಾನ್ನಿಧ್ಯವನ್ನು ಯರಗಲ್ ಬಿ.ಕೆ ಅರೂಢಮಠದ ಪೂಜ್ಯಶ್ರೀ ಅದ್ವೈತಾನಂದ ಅಪ್ಪಾಜಿ, ಶಂಕರಾನಂದಮಠದ ಪೂಜ್ಯಶ್ರೀ ರಾಜಪ್ಪಯ್ಯ ಸ್ವಾಮಿಗಳು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಕಸಾಪ ಜಿಲ್ಲಾಧ್ಯಕ್ಷ ಹಾಸೀಂಪೀರ ವಾಲೀಕಾರ ನೆರವೇರಿಸಲಿದ್ದಾರೆ. ಅತಿಥಿಗಳಾಗಿ ಮಾಜಿ ಜಿಪಂ ಸದಸ್ಯ ಮಹಾಂತಗೌಡ ಪಾಟೀಲ, ಗುರಲಿಂಗಪ್ಪಗೌಡ ಪಾಟೀಲ, ಹುಸೇನಸಾಬ ನದಾಫ್, ಶಂಕ್ರೆಪ್ಪ ಹಂಗರಗಿ, ಮಡಿವಾಳಪ್ಪ ಕಡಲಗೊಂಡ ಸೇರಿದಂತೆ ಕಸಾಪ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಮತ್ತು ಗ್ರಾಮದ ಗಣ್ಯರು ಆಗಮಿಸಲಿದ್ದಾರೆ ಕಾರಣ ಸುತ್ತಮುತ್ತಲಿನ ಗ್ರಾಮಸ್ಥರು, ಕಲಾಭಿಮಾನಿಗಳು, ಸಂಗೀತ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಬೇಕು ಎಂದು ಗೌರವ ಕಾರ್ಯದರ್ಶಿ ಶಿವಕುಮಾರ ಕಲ್ಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group