Homeಸುದ್ದಿಗಳುಬೆಳಗಾವಿ ಜಿಲ್ಲಾ ಕಸಾಪ ವತಿಯಿಂದ ಸಂಸ್ಥಾಪನಾ ದಿನಾಚರಣೆ

ಬೆಳಗಾವಿ ಜಿಲ್ಲಾ ಕಸಾಪ ವತಿಯಿಂದ ಸಂಸ್ಥಾಪನಾ ದಿನಾಚರಣೆ

ಬೆಳಗಾವಿ – ದಿನಾಂಕ 5 ರಂದು ಬೆಳಗಾವಿ ನಗರದ ಕನ್ನಡ ಭವನದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮವನ್ನು ಧಾರವಾಡ ರಂಗಾಯಣದ ನಿರ್ದೇಶಕ ರಮೇಶ ಪರವಿನಾಯ್ಕರ ಉದ್ಘಾಟಿಸಿ ಮಾತನಾಡಿ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಭಾಗಗಳಲ್ಲಿ ನಾಟಕ ಕಲೆ ಅಭಿವೃದ್ಧಿಯಾಗಬೇಕು, ಬೆಳಗಾವಿ ಸೇರಿದಂತೆ ಗಡಿಭಾಗದಲ್ಲಿ ಕಿತ್ತೂರಾಣಿ ಚೆನ್ನಮ್ಮನ ಜೀವನ ವೃತ್ತಾಂತ ಸಾರುವ ಬೃಹತ್ ಪ್ರಮಾಣದ ನಾಟಕ ಪ್ರದರ್ಶನವನ್ನು ಹಮ್ಮಿಕೊಳ್ಳಲು ರಂಗಾಯಣ ಪ್ರಯತ್ನಿಸುತ್ತಿದೆ ನಾಟಕ ಕಲೆ ಸೇರಿದಂತೆ ಕನ್ನಡದ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಹಿರಿಯ ಸಾಹಿತಿಗಳಾದ ಜಲತ್ಕುಮಾರ ಪುಣಜಗೌಡ ಮಾತನಾಡಿ, ಉತ್ತರ ಕರ್ನಾಟಕದ ಕುರಿತು ಸರಕಾರದ ನಿಲುವು ಇಲ್ಲಿನ ನೆಲ , ಜಲ, ಕಲೆ ಸಾಹಿತ್ಯದ ಕುರಿತು ವಿಶೇಷ ಗಮನ ಹರಿಸುವುದಾಗಿ ಆಗಬೇಕು ಆ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತು ಸೇರಿದಂತೆ ಕನ್ನಡ ಪರ ಹೋರಾಟಗಾರರು ಗಮನಸೆಳೆಯುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳುತ್ತಾ ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನದ ಕಾರ್ಯ ವೈಖರಿಗಳನ್ನು ವಿವರಿಸಿದರು. ಬೆಳಗಾವಿಯ ಲಿಂಗಾಯತ ಮಹಿಳಾ ಸಮಾಜದ ಸಂಸ್ಥಾಪಕ ಅಧ್ಯಕ್ಷೆ ಶೈಲಜಾ ಬಿಂಗೆ ಗಡಿಯಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸಗಳಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಡಾ. ಗುರುದೇವಿ ಹುಲೆಪ್ಪನವರಮಠ ನಾಡು-ನುಡಿಗೆ ತನ್ನದೇ ಆದ ಅಭಿಮಾನದ ಸೆಲೆಯ ಮತ್ತು ನಾಡಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸೇವೆಯನ್ನು ಸ್ಮರಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷೆ ಮಂಗಲಾ ಮೆಟಗುಡ್ ಪ್ರಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಕ್ಕಳ ಸಾಹಿತಿ ಅನ್ನಪೂರ್ಣ ಕನೋಜ ರವರು ಬರೆದ ‘ಮಕ್ಕಳ ಸಾಹಿತ್ಯಕ್ಕೆ ಬೈಲಹೊಂಗಲ ತಾಲೂಕಿನ ಕೊಡುಗೆ’ ಪುಸ್ತಕವನ್ನು ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬೆಳಗಾವಿ ತಾಲೂಕ ಕಸಾಪ ಅಧ್ಯಕ್ಷ ಸುರೇಶ ಹಂಜಿ , ಕ.ಸಾ.ಪ ಮಾಜಿ ಜಿಲ್ಲಾ ಅಧ್ಯಕ್ಷ ಮೋಹನಗೌಡ ಪಾಟೀಲ, ಸಾಹಿತಿಗಳಾದ ಜ್ಯೋತಿ ಬದಾಮಿ, ವಿದ್ಯಾವತಿ ಜನವಾಡೆ ಭಾರತಿ ಮಠದ, ಚೆನ್ನಪ್ಪ ಪಾಟೀಲ ಸೇರಿದಂತೆ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಪ್ರತಿಭಾ ಕಳ್ಳಿ ಮಠ ವೀರಭದ್ರ ಅಂಗಡಿ, ಸುನಿಲ್ ಹಲವಾಯಿ ಸೇರಿದಂತೆ , ಕನ್ನಡ ಅಭಿಮಾನಿಗಳು, ಪರಿಷತ್ತಿನ ಸದಸ್ಯರು, ಹಿರಿಯ ಸಾಹಿತಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಜಿಲ್ಲಾ ಕಾರ್ಯದರ್ಶಿ ಎಂ. ವೈ.ಮೆಣಸಿನಕಾಯಿ ಸ್ವಾಗತಿಸಿದರು. ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಹೇಮಾವತಿ ಸೋನೋಳ್ಳಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

RELATED ARTICLES

Most Popular

error: Content is protected !!
Join WhatsApp Group