spot_img
spot_img

‘ಶುಕ್ರವಾರ ಸಂಜೆ’ ಪಠ್ಯೇತರ ಕಾರ್ಯಕ್ರಮ

Must Read

- Advertisement -

ಮೂಡಲಗಿ: ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗೆ ಪೂರಕವಾಗುತ್ತವೆ ಎಂದು ಶಿಕ್ಷಕಿ ಪುಷ್ಪಾ ಭರಮದೆ ಹೇಳಿದರು. 

ಅವರು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶುಕ್ರವಾರ ಸಂಜೆ ಎಂಬ ಪಠ್ಯೇತರ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಶಾಲೆಯಲ್ಲಿ ಪ್ರತಿ ಶುಕ್ರವಾರ ಶುಕ್ರವಾರ ಸಂಜೆ ಎಂಬ ಪಠ್ಯೇತರ ಕಾರ್ಯಕ್ರಮ ಹಮ್ಮಿಕೊಂಡು ಶಿಕ್ಷಣಕ್ಕೆ ಪೂರಕವಾದ ಭಕ್ತಿಗೀತೆ, ಭಾವಗೀತೆ, ರಸಪ್ರಶ್ನೆ, ಜಾನಪದಗೀತೆ, ರಂಗೋಲಿ ಸ್ಪರ್ದೆ ಹೀಗೆ ಹಲವಾರು ಸ್ಪರ್ಧೆಗಳನ್ನು ನಡೆಸಿ ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯಿಂದ ಪ್ರೋತ್ಸಾಹಕರವಾಗಿ ಬಹುಮಾನ ನೀಡಲಾಗುತ್ತಿದೆ.

ಪ್ರತಿವಾರ ನಡೆಯುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಇದರಲ್ಲಿ ಪಠ್ಯ ಹಾಗೂ ಪಠ್ಯೇತರ ಎರಡೂ ವಿಷಯಗಳು ಒಳಗೊಂಡಿರುವದರಿoದ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗೆ ಹಾಗೂ ಜ್ಞಾನಾಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.

- Advertisement -

ಶಿಕ್ಷಕಿ ಲಕ್ಷ್ಮೀ ಹೆಬ್ಬಾಳ ಮಾತನಾಡಿ, ಒಂದರಿoದ ಎಂಟನೇ ತರಗತಿಯಲ್ಲಿ ತರಗತಿವಾರು ವಿಭಾಗಗಳನ್ನಾಗಿ ಮಾಡಿ ಪ್ರತಿ ವಾರ ಬೇರೆ ಬೇರೆ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ವಿಜೇತರಿಗೆ ಪ್ರೋತ್ಸಾಹದಾಯಕವಾಗಿ ಬಹುಮಾನಗಳನ್ನು ನೀಡಲಾಗುತ್ತದೆ ಎಂದರು.

ಶಾಲೆಯ ಪ್ರಧಾನಗುರು ಎ.ವ್ಹಿ. ಗಿರೆಣ್ಣವರ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಪ್ರತಿನಿಧಿ ಶ್ರೀದೇವಿ ಹುಲಕುಂದ ಶಿಕ್ಷಕರಾದ ಕುಸುಮಾ ಚಿಗರಿ, ವಿಮಲಾಕ್ಷಿ ತೋರಗಲ, ಶೀಲಾ ಕುಲಕರ್ಣಿ, ಜ್ಯೋತಿ ಉಪ್ಪಾರ, ಮಹಾದೇವ ಗೋಮಾಡಿ, ಶಂಕರ ಲಮಾಣಿ, ಕಿರಣ ಭಜಂತ್ರಿ, ರೂಪಾ ಗದಾಡಿ, ಶಿವಲೀಲಾ ಹಣಮನ್ನವರ, ಖಾತೂನ ನದಾಫ, ಹೊಳೆಪ್ಪ ಗದಾಡಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group