ಮೂಡಲಗಿ: 75 ನೇ ಸ್ವಾತಂತ್ರ್ಯೋತ್ಸ ದಿನದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಅರಭಾವಿ ಮಂಡಲ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ ನೇತೃತ್ವದಲ್ಲಿ ‘ಯುವ ಸಂಕಲ್ಪ ಯಾತ್ರೆ’ಯ ಸೈಕಲ್ ಜಾಥಾದಲ್ಲಿ ವಿವಿಧ ಮೋರ್ಚಾಗಳ ಕಾರ್ಯಕರ್ತರು ಸಂಗನಕೇರಿಯಿಂದ ಮೂಡಲಗಿಯ ಕಲ್ಮೇಶ್ವರ ವೃತ್ತದವರೆಗೆ ಸೈಕಲ್ ಜಾಥಾ ನಡೆಸಿದರು.
ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ನಾಗಪ್ಪ ಶೇಖರಗೋಳ, ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ರಾಜ್ಯ ಕಾರ್ಯದರ್ಶಿ ಈರಣ್ಣ ಅಂಗಡಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಿದ್ದಣ್ಣ ದುರದುಂಡಿ, ಮಂಡಲ ಅದ್ಯಕ್ಷ ಮಹಾದೇವ ಶೆಕ್ಕಿ, ಜಿಲ್ಲಾ ಎಸ್ಸಿ ಮೋರ್ಚಾ ಕಾರ್ಯದರ್ಶಿ ಈರಪ್ಪ ಢವಳೇಶ್ವರ, ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಬಸು ಮಾಳೇದ, ಮಂಡಲ ಕಾರ್ಯದರ್ಶಿ ಮಹಾಂತೇಶ ಕುಡಚಿ, ಕರುನಾಡು ಪೋಲಿಸ ಹಾಗೂ ಸೈನಿಕ ತರಬೇತಿ ಕೇಂದ್ರದ ಪ್ರಶಿಕ್ಷಣಾರ್ಥಿಗಳು, ಅನೇಕ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೈಕಲ್ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.