ಆಧ್ಯಾತ್ಮಿಕ ಜ್ಞಾನ ಪಡೆದು ಜೀವನ ಪಾವನ ಮಾಡಿಕೊಳ್ಳಬೇಕು – ಸಂಗನಬಸವ ಶ್ರೀ

Must Read

ಸಿಂದಗಿ – ಗುರುವಿನ ಗುಲಾಮನಾಗುವತನಕ ದೊರೆಯದಣ್ಣ ಮುಕ್ತಿ ಎನ್ನುವಂತೆ ಗುರುಗಳ ಸೇವೆ ಎಷ್ಟು ಮಾಡುತ್ತೀರಿ ಅಷ್ಟು ಜೀವನ ಪ್ರಾಪ್ತಿಯಾಗುತ್ತದೆ ಮಠ-ಮಾನ್ಯಗಳು ಊರಿನ ಹೊರಗೆ ಪ್ರಶಾಂತ ಸ್ಥಳದಲ್ಲಿದ್ದು ಜಪ-ತಪ ಯೋಗಾಭ್ಯಾಸ ಗಳನ್ನು ಮಾಡುತ್ತ ಜನರ ಕಷ್ಠ ಕಾರ್ಪಣ್ಯಗಳಿಗೆ ಸ್ಪಂದಿಸುವ ಶ್ರೀಮಠವು ಬಡವರ ಮಠವಾಗಿದ್ದು ಮಾನವ ಜನ್ಮದ ಉದ್ಧಾರಕ್ಕೆ ಅನೇಕ ಮಹಾಪುರುಷ ಪುರಾಣ ಪ್ರವಚನಗಳನ್ನು ಹಾಕಿಕೊಳ್ಳುತ್ತಿದು ಮಾನವ ಆಧ್ಯಾತ್ಮಿಕ ಜ್ಞಾನವನ್ನು ಪಡೆದುಕೊಂಡು ತಮ್ಮ ಜೀವನ ಪಾವನ ಮಾಡಿಕೊಳ್ಳಬೇಕು. ಎಂದು ಮನಗೂಳಿಯ ಹಿರೇಮಠದ ಪೂಜ್ಯಶ್ರೀ ಸಂಗನಬಸವ ಶ್ರೀಗಳು ಹೇಳಿದರು.

ಪಟ್ಟಣದ ಬಸ್‌ಡಿಪೋ ಹತ್ತಿರದಲ್ಲಿರುವ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ಆವರಣದಲ್ಲಿ ಹಮ್ಮಿಕೊಂಡ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ೨೯ನೆಯ ಜಾತ್ರಾ ಮಹೋತ್ಸವ-ಧರ್ಮಸಭೆ ಕಾರ್ಯಕ್ರಮ ನಿಮಿತ್ತ ಹಮ್ಮಿಕೊಂಡ ಶ್ರೀ ರೇವಣಸಿದ್ದೇಶ್ವರ ಪುರಾಣ ಪ್ರವಚನ ಸಮಾರಂಭದ ಅದ್ಯಕ್ಷತೆ ವಹಿಸಿ ಮಾತನಾಡಿ, ಮನುಷ್ಯನಿಗೆ ಆಕ್ಸಿಜನ್ ನೀಡುವ ಗಿಡ-ಮರಗಳನ್ನು ಮನೆ ಕಟ್ಟುವ ಮುನ್ನವೇ ಹಚ್ಚಿ ನೈಸರ್ಗಿಕವಾದ ಗಾಳಿ ಪಡೆದುಕೊಂಡು ಆಯುಷ್ಯ ವೃದ್ಧಿಪಡಿಸಿಕೊಳ್ಳಬೇಕು ಎಂದರು.

ಆದಿಶೇಷ ಶ್ರೀಮಠದ ನಾಗರತ್ನ ರಾಜಯೋಗಿ ವೀರರಾಜೇಂದ್ರ ಮಹಾಸ್ವಾಮಿಗಳು ಮಾತನಾಡಿ, ಜ.೨೨ ರಂದು ಶ್ರೀಮಠದ ಸುತ್ತಮುತ್ತ ಆಧಿಶೇಷರ ಮೆರವಣಿಗೆ ಬರುತ್ತಿದ್ದು ಎಲ್ಲ ತಾಯಂದಿರು ಮನೆ ಮುಂದೆ ಅಲಂಕಾರ ಮಾಡುವ ಮೂಲಕ ಸ್ವಚ್ಚತೆ ಕಾಪಾಡಿ ಪ್ರತಿ ಮನೆಯ ನೀರು ಹೂವು ಹಣ್ಣು ಕಾಯಿ ಹಿಡಿದುಕೊಂಡು ಸ್ವಾಗತಿಸಿಕೊಂಡು ತಮ್ಮ ಜೀವನ ಪಾವನಗೊಳಿಸಿಕೊಳ್ಳಬೇಕು ಮತ್ತು ಜ.೨೩ ರಂದು ನಾಲವಾರ ಶ್ರೀಮಠದ ಶಿವಯೋಗಿ ಡಾ.ಚಂದ್ರಶೇಖರ ಸ್ವಾಮಿಗಳ ೫೪ನೇ ಅನುಷ್ಠಾನ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆಶಿರ್ವಾದ ಪಡೆದುಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷ ಪಂಡಿತ ಯಂಪೂರೆ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಜ್ಞಾನವನ್ನು ನೀಡಿದರೆ ಮಠ-ಮಂದಿರಗಳಲ್ಲಿ ಸಂಸ್ಕಾರದ ಜೊತೆಗೆ ಅಧ್ಯಾತ್ಮ ದೊರೆಯುತ್ತದೆ ಕಾರಣ ತಾಯಂದಿರು ಮಕ್ಕಳನ್ನು ಪುರಾಣ ಪುಣ್ಯಕತೆಗಳಲ್ಲಿ ತೊಡಗಿಸಬೇಕು ಇದರಿಂದ ಆದ್ಯಾತ್ಮಿಕ ಚಿಂತನೆ ಬೆಳೆಯುತ್ತದೆ ಅಲ್ಲದೆ ನಿತ್ಯ ಕೇಳುವ ಪುರಾಣದ ತುಣುಕುಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದಕ್ಕೂ ಸ್ವಾರ್ಥಕವಾಗುತ್ತದೆ ಎಂದು ಅಭಿಮತ ವ್ಯಕ್ತಪಡಿಸಿದರು.

ದಿವ್ಯ ಸಾನ್ನಿಧ್ಯ ವಹಿಸಿದ ನಾಲವಾರ ಶ್ರೀಮಠದ ಶಿವಯೋಗಿ ಡಾ.ಚಂದ್ರಶೇಖರ ಸ್ವಾಮಿಗಳು, ಬಾಜಪ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ ಪೂಜಾರ, ಅಶೋಕ ಕಮರಡ್ಡಿ, ದುಂಡಪ್ಪಗೌಡ ಆನಗೊಂಡ, ಪ್ರವಚನಕಾರ ಮೈಂದರಗಿ ಗುರುಹಿರೇಮಠದ ಷ.ಬ್ರ ಅಭಿನವ ರೇವಣಸಿದ್ದ ಗುರುಗಳು, ಸಂಗೀತಗಾರ ಶಾಂತಲಿಗ ಹೊನ್ನಕಿರಣಗಿ, ತಬಲಾ ಆಕಾಶ ಹೈದ್ರಾ, ಸೇರಿದಂತೆ ಶ್ರೀಮಠದ ಭಕ್ತರು ಇದ್ದರು.
ಪೂಜಾ ಹಿರೇಮಠ ನಿರೂಪಿಸಿದರು. ಸಿದ್ದಲಿಂಗಯ್ಯ ಹಿರೇಮಠ ಸ್ವಾಗತಿಸಿದರು.

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group