ಮನಸ್ಸಿನ ಕಲ್ಮಶಗಳನ್ನು ದೂರಮಾಡಿ ಜೀವನ ಆನಂದವಾಗಿಸಿರಿ

Must Read

ಮೂಡಲಗಿ: ‘ಮನಸ್ಸಿನಲ್ಲಿರುವ ಕಲ್ಮಶಗಳನ್ನು ದೂರಮಾಡಿ ಉತ್ತಮ ಚಿಂತನೆ, ಆಚರಣೆಗಳೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡು ಜೀವನವನ್ನು ಆನಂದಮಯವಾಗಿಸಿಕೊಳ್ಳಬೇಕು’ ಎಂದು ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು.

ಇಲ್ಲಿಯ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರೇಖಾ ಅಕ್ಕನವರು ಭಕ್ತರೊಂದಿಗೆ ದೀಪವನ್ನು ಬೆಳಗಿಸುವ ಮೂಲಕ ಹೊಸ ವರ್ಷವನ್ನು ಆಚರಿಸಿ ಮಾತನಾಡಿದ ಅವರು ದೇವರಲ್ಲಿ ಧ್ಯಾನ, ಭಕ್ತಿಯನ್ನು ಇಡುವುದರ ಮೂಲಕ ಬದುಕಿನಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತ ಮಾಡಿಕೊಳ್ಳಬೇಕು ಎಂದರು.

ಸಮಾಜದಲ್ಲಿ ಪ್ರೀತಿ, ಸೌಹಾರ್ದತೆಯಿಂದ ಬದುಕುವ ಮೂಲಕ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಬೇಕು. ಪ್ರಕೃತಿಯನ್ನು ಪ್ರೀತಿಸಬೇಕು ಎಂದರು.

ಭಕ್ತಿಯ ಗಾಯನ ಮತ್ತು ಧ್ಯಾನವನ್ನು ಮಾಡಿದರು. ಭಕ್ತರಿಗೆ ಸಿಹಿ ಹಂಚಿದರು.

ಬ್ರಹ್ಮಕುಮಾರಿ ಸವಿತಾ ಅಕ್ಕನವರು ಹಾಗೂ ಭಕ್ತರು ಭಾಗವಹಿಸಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group