ಮೊಬೈಲ್ ಜಾಸ್ತಿ ಬಳಸಬೇಡ ಓದಿಕೋ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕಿ

Must Read

ಬೀದರ – ಮೊಬೈಲ್ ಹೆಚ್ಚು ಬಳಕೆ ಮಾಡಬೇಡ ಓದುವ ಕಡೆ ಗಮನ ಹರಿಸು ಎಂದು ತಂದೆ ಹೇಳಿದ್ದಕ್ಕೆ ಬೇಸರ ಮಾಡಿಕೊಂಡ ಅಪ್ರಾಪ್ತ ಮಗಳು ನೇಣು ಹಾಕಿಕೊಂಡು ಜೀವ ತೆತ್ತ ಘಟನೆ ಗಡಿ ಜಿಲ್ಲೆ ಬೀದರನ ಕಮಲನಗರ ತಾಲೂಕಿನ ಡಿಗ್ಗಿ ಪಟ್ಟಣದಲ್ಲಿ ನಡೆದಿದೆ.

15 ವಯಸ್ಸಿನ ಮಗಳು ದಿನಾಲು ಮೊಬೈಲ್ ನಲ್ಲಿ ಇರುವುದನ್ನು ತಂದೆ, ಮಗಳೆ ಮೊಬೈಲ್‌ ಜಾಸ್ತಿ ಉಪಯೋಗ ಮಾಡಬೇಡ ಓದುವ ಕಡೆ ಗಮನ ಹರಿಸು ಎಂದು ಹೇಳಿ ಪರ ಊರಿಗೆ ಹೋಗಿದ್ದು ತಂದೆಯ ಮಾತಿಗೆ ಮನನೊಂದ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸೋನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸೋನಿ ಸಂತೋಷ ಬನವಾಸೆ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ತಂದೆ ಸಂತೋಷ ಬನವಾಸೆ ನೀಡಿದ ದೂರಿನ ಮೇರೆಗೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವರದಿ : ನಂದಕುಮಾರ ಕರಂಜೆ, ಬೀದರ

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...

More Articles Like This

error: Content is protected !!
Join WhatsApp Group