Homeಸುದ್ದಿಗಳುಮಂದಿರಗಳಲ್ಲಿ ಗೋ ಪೂಜೆ ನಿರ್ಧಾರ ಸ್ವಾಗತಾರ್ಹ - ಈರಣ್ಣ ಕಡಾಡಿ

ಮಂದಿರಗಳಲ್ಲಿ ಗೋ ಪೂಜೆ ನಿರ್ಧಾರ ಸ್ವಾಗತಾರ್ಹ – ಈರಣ್ಣ ಕಡಾಡಿ

ಮೂಡಲಗಿ: ಗೋವುಗಳ ಮಹತ್ವ ಹಾಗೂ ಗೋವುಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲಾ ಹಿಂದೂ ದೇವಾಲಯಗಳಲ್ಲಿ ಗೋಮಾತೆಯನ್ನು ಪೂಜಿಸುವ ಇಲಾಖೆಯ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.

ಬುಧವಾರ ಅ.26 ರಂದು ಕಲ್ಲೋಳಿ ಪಟ್ಟಣದಲ್ಲಿ ಮುಜರಾಯಿ ಇಲಾಖೆ ವತಿಯಿಂದ ಮಾರುತಿ ದೇವರ ದೇವಸ್ಥಾನದಲ್ಲಿ ನಡೆದ ಗೋಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೋ ಪೂಜೆಯನ್ನು ನೆರವೇರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ನಮ್ಮ ಧಾರ್ಮಿಕ ಹಾಗೂ ಸಾಂಸ್ಕøತಿಕ ಪರಂಪರೆಯಲ್ಲಿ ಗೋವುಗಳಿಗೆ ವಿಶಿಷ್ಠವಾದ ಸ್ಥಾನವಿದೆ, ಗ್ರಾಮೀಣ ಪ್ರದೇಶದಲ್ಲಿ ಗೋವುಗಳು ರೈತರ ಜೀವನಾಧಾರವಾಗಿದೆ. ಗೋವುಗಳ ಸಂತತಿಯನ್ನು ನಾವು ಬೆಳೆಸಬೇಕಾದರೆ ಮೊದಲು ಗೋವುಗಳನ್ನು ಉಳಿಸುವುದು ಮುಖ್ಯವಾಗಿದೆ ಎಂದರು.

ಕಲ್ಲೋಳಿ ಪಟ್ಟಣದ ಮುಜರಾಯಿ ಇಲಾಖೆ ವತಿಯಿಂದ ಮಾರುತಿ ದೇವರ ದೇವಸ್ಥಾನದಲ್ಲಿ ನಡೆದ ಗೋಪೂಜಾ ಕಾರ್ಯಕ್ರಮದಲ್ಲಿ ಗೋ ಪೂಜೆಯನ್ನು ನೆರವೇರಿಸುತ್ತಿರುವ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ. ಇತರರು ಇದ್ದರು.

ರಾಜ್ಯ ಸರ್ಕಾರ ಕರ್ನಾಟಕ ಗೋ ಸಂರಕ್ಷಣಾ ಕಾಯಿದೆಯನ್ನು ಜಾರಿಗೆ ತರುವ ಮೂಲಕ ಗೋವುಗಳ ರಕ್ಷಣೆಯ ದೃಷ್ಠಿಯಲ್ಲಿ ಪ್ರಮುಖವಾದ ನಿರ್ಧಾರವನ್ನು ಕೈಗೊಂಡಿದೆ. ಆ ಮೂಲಕ ಗೋವುಗಳನ್ನು ಕಸಾಯಿಖಾನೆಗೆ ದೂಡುವಂತಹ ಕೃತ್ಯಕ್ಕೆ ಕಡಿವಾಣ ಹಾಕಿ ಅವುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದರು.

ಗ್ರಾಮದ ಪ್ರಮುಖರಾದ ಪ್ರಭು ಕಡಾಡಿ, ಹನಮಂತ ಸಂಗಟಿ, ಶಂಕರ ಗೋರೋಶಿ, ಅಡಿವೆಪ್ಪ ಕುರಬೇಟ, ಈರಣ್ಣ ಮುನ್ನೋಳಿಮಠ, ಶಿವಪ್ಪ ಬಿ.ಪಾಟೀಲ, ಹನಮಂತ ಪರಕನಟ್ಟಿ, ಗುರುನಾಥ ಮದಭಾಂವಿ, ಶಿವಲಿಂಗ ಕುಂಬಾರ, ಪರಪ್ಪ ಗಿರೆಣ್ಣವರ, ಮಹಾಂತೇಶ ಬಿ.ಪಾಟೀಲ, ಸೇರಿದಂತೆ ಇಲಾಖೆ ಅಧಿಕಾರಿಗಳು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

Most Popular

error: Content is protected !!
Join WhatsApp Group