🌸 ಭಾರತೀಯ ಮನೆಗಳ ಪ್ರವೇಶ ದ್ವಾರದಲ್ಲಿ ಸ್ವಸ್ತಿಕ ಚಿಹ್ನೆ ಸಾಮಾನ್ಯವಾಗಿರುತ್ತದೆ. ಅನಾದಿ ಕಾಲದಿಂದಲೂ ಬಳಸುತ್ತಿರುವ ಈ ಚಿಹ್ನೆಗೆ ಹಿಂದೂ ಸಂಪ್ರದಾಯದಲ್ಲಿ ವಿಶೇಷ ಮಹತ್ವವಿದೆ. ಗಣೇಶನನ್ನು ಪ್ರತಿನಿಧಿಸುವ ಈ ಚಿಹ್ನೆಯ ವಿಶೇಷವೇನು ? ವಾಸ್ತು ಶಾಸ್ತ್ರ ಏನು ಹೇಳುತ್ತದೆ ?
🌸 ಭಾರತದಲ್ಲಿ ಅನಾದಿ ಕಾಲದಿಂದಲೂ ಬಳಸುತ್ತಿರುವ ಒಂದು ಶುಭ ಚಿಹ್ನೆ ಎಂದರೆ ಅದು ಸ್ವಸ್ತಿಕ. ಭಾರತದಲ್ಲಿ ಹುಟ್ಟಿದಂಥ ಈ ಚಿಹ್ನೆಗೆ ಸುಮಾರು 6000 ವರ್ಷದ ಇತಿಹಾಸವಿದೆ. ಇದು ಮನೆಯಲ್ಲಿ ಇದ್ದರೆ ಮಾಡುವ ಕೆಲಸಗಳು ಶುಭಪ್ರದವಾಗುತ್ತದೆ ಎಂಬ ನಂಬಿಕೆ ಇದೆ. ಹಾಗಾದರೆ ಸ್ವಸ್ತಿಕದಿಂದ ಮನೆಗೆ ಯಾವ ರೀತಿ ಒಳಿತಾಗುತ್ತದೆ ?
🌷 ಸ್ವಸ್ತಿಕ ಸಂಪತ್ತು ಮತ್ತು ಸಮೃದ್ಧಿಯ ಸಂಕೇತ. ಈ ಚಿಹ್ನೆಯ ಎಡ ಬದಿಯಲ್ಲಿ ಗಣೇಶ ಇರುವನೆಂದು ಸೂಚಿಸುತ್ತದೆ. ಸ್ವಸ್ತಿಕ ಮನೆಯಲ್ಲಿದ್ದರೆ ಸಂಪತ್ತು ಮತ್ತು ಸಮೃದ್ಧಿ ಮನೆಯಲ್ಲಿ ಸದಾ ತುಂಬಿರುತ್ತದೆ ಎಂದರ್ಥ.
🌷 ನಕಾರಾತ್ಮಕತೆಯನ್ನು ದೂರ ಮಾಡುತ್ತದೆ. ಸ್ವಸ್ತಿಕ ಚಿಹ್ನೆ ಮನೆಯಲ್ಲಿ ಇರುವುದು ಶುಭ ಎಂದು ವಾಸ್ತು ಶಾಸ್ತ್ರವೂ ಹೇಳುತ್ತದೆ. ಇದು ಮನೆಯಲ್ಲಿನ ನೆಗೆಟಿವ್ ಎನರ್ಜಿಯನ್ನು ಹೊರ ಹಾಕಿ, ಪಾಜಿಟಿವ್ ಎನರ್ಜಿಯನ್ನು ಹೆಚ್ಚಿಸುತ್ತದೆ.
🌷 ದುಷ್ಟ ಶಕ್ತಿ ದಮನ: ಸ್ವಸ್ತಿಕ ಚಿಹ್ನೆಯನ್ನು ಮನೆ ಮುಂಭಾಗಿಲಿನಲ್ಲಿ ಹಾಕಿದರೆ, ದುಷ್ಟ ಶಕ್ತಿಗಳು ಮನೆಯೊಳಗೆ ಬರೋದಿಲ್ಲ ಎನ್ನಲಾಗುತ್ತದೆ.
🌷 ಸ್ವಸ್ತಿಕ್ ಲಾಂಛನದ ಮೇಲೆ ದೇವರ ತೀರ್ಥ ಗಂಗಾ ಜಲ ಮತ್ತು ಹಸುವಿನ ಗಂಜಲವನ್ನು ಚಿಮುಕಿಸುತ್ತಿದ್ದರೆ ಅದರ ಶಕ್ತಿ ಹೆಚ್ಚಾಗುತ್ತದೆ.
🌷 ಸ್ವಸ್ತಿಕ್ ಲಾಂಛನವನ್ನು ಅಳವಡಿಸಿದ ನಂತರ ಧೂಳು ಬೀಳದೆ ಇರುವ ಹಾಗೆ ಆಗಾಗ ಒರೆಸುತ್ತಿರಬೇಕು.
🌷 ಸ್ವಸ್ತಿಕ್ ಲಾಂಛನವು ಹಿತ್ತಾಳೆ ಅಥವಾ ಪಂಚಲೋಹದಿಂದ ಮಾಡಿದ್ದರೆ ಒಳ್ಳೆಯದು.
🌷 ಸ್ವಸ್ತಿಕ್ ಲಾಂಛನವು ಮನೆಯಲ್ಲಿ ಸುಖ, ಸಂತೋಷ, ಶಾಂತಿ, ಗುರಿಯನ್ನು ಸಾಧಿಸಲು ಸಹಾಯ ಮಾಡುತ್ತದೆ.
🌷 ಸ್ವಸ್ತಿಕ್ ಲಾಂಛನವು ಮನೆಯ ಸುತ್ತಲಿನ ಜಾಗವನ್ನು ದುಷ್ಟ ಶಕ್ತಿಗಳಿಂದ ರಕ್ಷಿಸುತ್ತದೆ.
🌷 ಮನೆಯ ಗೇಟ್ ಹಾಗೂ ಕಾಂಪೌಂಡ್ ಗೋಡೆ ಮೇಲೆ ಸ್ವಸ್ತಿಕ್ ಲಾಂಛನವನ್ನು ಹಾಕಬೇಕು.
🚩ಶ್ರೀ ಭಗವಂತ ಪರಶುರಾಮ🚩
ಇಂತಿ ಜ್ಯೋತಿಷ್ಯ ಸೇವೆಯಲ್ಲಿ ತಮ್ಮವ ಪ್ರಾಚೀನಶಾಸ್ತ್ರಾಸಕ್ತ
L ವಿವೇಕಾನಂದ ಆಚಾರ್ಯ🇮🇳 (Army Rtd) Gubbi.
ph no :9480916387