ಬೀದರ – ರಾಜ್ಯದಲ್ಲಿ ಕುರ್ಚಿಗಾಗಿ ಇಬ್ಬರ ಮಧ್ಯೆ ಕಾದಾಟ ನಡೆದಿದ್ದು ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಬೀದರನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ಧರಾಮಯ್ಯ ಐದು ವರ್ಷ ನಾನೇ ಸಿಎಂ ಅಂತಾರೆ, ಡಿಕೆಶಿ ಎರಡೂವರೆ ವರ್ಷದ ಒಪ್ಪಂದ ಆಗಿದೆ ಅಂತಾರೆ.ಸಿಎಂ ಕುರ್ಚಿ ಬಿಡದಿದ್ದರೆ ಒದ್ದು ತಗೋತೀನಿ ಅಂತಾರೆ ಬಹುಶಃ ಆ ಕಾಲ ಬರುತ್ತದೆ ಅಂತ ಕಾಣುತ್ತದೆ ಎಂದು ಮಾರ್ಮಿಕವಾಗಿ ನುಡಿದರು.
ಕಾಂಗ್ರೆಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಕೇವಲ ಪದಾಧಿಕಾರಿ ಅಷ್ಟೇ ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿಯವರೇ ಸರ್ವಾಧಿಕಾರಿಗಳು.ಅವರ ಆಣತಿಯಂತೆ ಪಕ್ಷ ನಡೆಯುತ್ತದೆ ಖರ್ಗೆ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಕಾರಜೋಳ ವಾಗ್ದಾಳಿ ನಡೆಸಿದರು.
ವರದಿ : ನಂದಕುಮಾರ ಕರಂಜೆ, ಬೀದರ

