ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರವಾದ ವಿಧಾನ ಸೌಧದ ಮೂರನೇ ಮಹಡಿಯಲ್ಲಿ ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ ಅವರನ್ನು ಗುರುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸೌಹಾರ್ಧಯುತವಾಗಿ ಭೇಟಿ ಮಾಡಿದರು.
ಇದೇ ಸಂದರ್ಭದಲ್ಲಿ ಅವರನ್ನು ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಲಿನಿ ರಜನೀಶ ಅವರು, ಸರ್ಕಾರ ಹಾಗೂ ಮಾಧ್ಯಮ ಕ್ಷೇತ್ರ ಸೌಹಾರ್ದಯುತವಾಗಿ ಸೇರಿ ಕೆಲಸ ಮಾಡೋಣ. ತಮ್ಮ ಸಲಹೆಗೆ ಸರ್ಕಾರ ಸದಾ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಭವಾನಿಸಿಂಗ ಠಾಕೂರ, ಬೀದರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಸಂಘದ ಸದಸ್ಯರಾದ ಸುನಿಲಕುಮಾರ ಹೊನ್ನಾಳೆ ಈ ಸಂದರ್ಭದಲ್ಲಿ ಹಾಜರಿದ್ದರು.