spot_img
spot_img

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸಾಯಿಟಿಯ ಠೇವಣಿದಾರರ ಹಣ ಸರ್ಕಾರ ವಾಪಸ್ ಕೊಡಿಸಬೇಕು

Must Read

spot_img
- Advertisement -

ಕರ್ನಾಟಕ ಸರಕಾರ ಬಡವರ ಪರ ಕಾಳಜಿ ಎಂದೆನ್ನುವುದು ಸಂಪೂರ್ಣ ಸುಳ್ಳಾಗಿದೆ. ನಾಡು ಕಂಡ ಅತ್ಯಂತ ಭ್ರಷ್ಟ ಸರಕಾರ ಇದಾಗಿದೆ ಎಂದರೆ ತಪ್ಪಲ್ಲ. ಸಹಕಾರ ಕ್ಷೇತ್ರ, ಕಂದಾಯ ಇಲಾಖೆಯ ಮಂತ್ರಿಗಳು ಜನರ ಹಣವನ್ನು ಕೊಳ್ಳೆ ಹೊಡೆಯಲು ಬಿಟ್ಟು ಮೋಜು ನೋಡುತ್ತಿದ್ದಾರೆ.

ಬಹು ಕೋಟಿ ವಂಚನೆ ಹಗರಣದ ಬೆಳಗಾವಿ ಮೂಲದ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಸ್ಥೆಯಲ್ಲಿ ಸಾವಿರಾರು ಜನರು ತಮ್ಮ ಉಳಿತಾಯಕ್ಕಾಗಿ ಭವಿಷ್ಯಕ್ಕಾಗಿ ಠೇವಣಿ ಹಣವನ್ನ ಇಟ್ಟಿದ್ದರು. ಚಿತ್ರೋದ್ಯಮಿ ವಂಚಕ ಆನಂದ ಅಪ್ಪುಗೋಳ ಎಂಬ ಪರಮ ನೀಚನು ಠೇವಣಿದಾರರಿಗೆ ಪಂಗನಾಮ ಹಾಕಿದ್ದು ಸಾವಿರಾರು ಕೋಟಿ ಆಸ್ತಿಯ ದಾಖಲೆ ಇದ್ದರೂ ಕಳೆದ ಏಳು ವರ್ಷದಿಂದ ಸಂಗೊಳ್ಳಿ ರಾಯಣ್ಣ ಸಹಕಾರಿ ಹಣಕಾಸು ಸಂಸ್ಥೆಯ ಅವ್ಯವಹಾರ ಇನ್ನೂ ಇತ್ಯರ್ಥವಾಗಿಲ್ಲ. 2020 ರಲ್ಲಿ ಬೆಳಗಾವಿ ಅಸಿಸ್ಟೆಂಟ್ ಕಮಿಷನರ್ ಕಚೇರಿಯಲ್ಲಿ ಎಲ್ಲರಿಗೂ ಠೇವಣಿ ಪತ್ರದ ನಕಲು ಪ್ರತಿಗಳನ್ನು ಹಚ್ಚಲು ಹೇಳಿ ಅರ್ಜಿಗಳನ್ನು ಸ್ವೀಕರಿಸಿದರು.

ಬಡವರು ಕಾರ್ಮಿಕರು ಮದ್ಯಮ ವರ್ಗದವರು
ಅರ್ಜಿ ಸಲ್ಲಿಸಿ ತಾವು ತುಂಬಿದ ಠೇವಣಿ ಹಣ ಬರುವುದೆಂದು ದಾರಿ ಕಾಯ್ದರು. ನಾಲ್ಕು ವರ್ಷ ಗತಿಸಿದವು. ಕಳೆದ ಡಿಸೆಂಬರ್ ನಲ್ಲಿ ವಿಶೇಷಾಧಿಕಾರಿ ( KPID ) ಕಂದಾಯ ಇಲಾಖೆಗೆ ಒಳಪಟ್ಟ ಸಂಸ್ಥೆ ಮತ್ತೆ ಪತ್ರಿಕೆಯಲ್ಲಿ ಜಾಹಿರಾತು ಮಾಡಿ, ಠೇವಣಿದಾರರು ಮತ್ತೆ ಅರ್ಜಿ ಸಲ್ಲಿಸಲು ಹೇಳಿದರು. ಬಡವರು ಕೂಲಿ ಕಾರ್ಮಿಕರು ಬೆಂಗಳೂರಿನ ಮಹಾನಗರದಲ್ಲಿ ರಸ್ತೆ ಬದಿ ಮಲಗಿ ತಮ್ಮ ಕಾಗದ ಪತ್ರಗಳನ್ನು ಸಲ್ಲಿಸಿದರು. ಅದನ್ನು ಅತ್ಯಂತ ಶಿಸ್ತುಬದ್ಧವಾಗಿ ಪರಿಶೀಲಿಸಿ ಅದಕ್ಕೆ ರಸೀದಿ ನೀಡಿದರು. ಹಣ ಬರುತ್ತದೆ ಎಂದು ಮತ್ತೆ ಜನರ ನಂಬಿಕೆ ಈಗ ಹುಸಿಯಾಗಿದೆ. 12 ತಿಂಗಳು ಕಳೆದ ನಂತರ ಈಗ ಅಸಿಸ್ಟೆಂಟ್ ಕಮಿಷನರ್ ಕೆ ಪಿ ಐ ಡಿ ಮೂರನೆಯ ಮತ್ತು ನಾಲ್ಕನೆಯ ಮಹಡಿ ಪೋಡಿಯಂ ಬ್ಲಾಕ್ ಡಾ ಅಂಬೇಡ್ಕರ ವೀಧಿ ಬೆಂಗಳೂರ ಕಚೇರಿಯಲ್ಲಿ ದಿನವಿಡೀ ತಪಾಸಣೆ ಮಾಡಿ ಮುದುಕರು ಮಹಿಳೆಯರು ಸಲ್ಲಿಸಿದ ಅರ್ಜಿಗಳು ಈಗ ಮತ್ತೆ ತಿರಸ್ಕ್ರತವೆಂದು ಪತ್ರ ಹಾಕಿದ್ದಾರೆ.

- Advertisement -

ಆನಂದ ಅಪ್ಪುಗೋಳ ಎಂಬ ವಂಚಕನ ಅಸ್ತಿ ಜಪ್ತಿ ಮಾಡಿ ತನಿಖೆ ನಡೆಸಿ ಶಿಕ್ಷೆ ಕೊಡುವ ಬದಲು ಬಸದವರ ಕರುಳ ಹರಿದು ಮಾಲೆ ಹಾಕಿಕೊಂಡ ಕೃಷ್ಣಾ ಭೈರೇಗೌಡ, ಕಂದಾಯ ಮಂತ್ರಿ ಕೆ ಎನ್ ರಾಜಣ್ಣ, ಸಹಕಾರ ಮಂತ್ರಿ ಮತ್ತು ಜಾಣ ಕುರುಡುತನ ತೋರಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಕೂಡಲೇ ಜನರಿಗೆ ಸಹಾಯ ಮಾಡಲಿ.

ಸರಕಾರದ ಮೇಲೆ ಸಂಶಯ ಮೂಡುತ್ತಿದೆ. ಇದರಲ್ಲಿ ಎಷ್ಟೋ ಜನರು ಸತ್ತಿದ್ದಾರೆ. ಒಂದು ವೇಳೆ ಸಮಯಕ್ಕೆ ಸರಿಯಾಗಿ ಹಣ ಬರದಿದ್ದರೆ ಮತ್ತಷ್ಟು ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಸಂಗ ಬಂದಿದೆ. ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳ ಕಿರುಕುಳ ತಪ್ಪಿಸಿ ಸನ್ಮಾನ್ಯ ಮುಖ್ಯ ಮಂತ್ರಿಗಳೇ ಈ ಕೂಡಲೇ ಠೇವಣಿ ಇಟ್ಟ ಹಣವನ್ನು ಸಂಗೊಳ್ಳಿ ರಾಯಣ್ಣ ಅರ್ಬನ್ ಸಹಕಾರ ಸಂಸ್ಥೆಯಿಂದ ಮರುಪಾವತಿಸದಿದ್ದರೆ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ. ಕರುಣೆ ಮಮತೆ ಇಲ್ಲದ ಕಟುಕರ ಸರಕಾರಕ್ಕೆ ಧಿಕ್ಕಾರವಿದೆ. ಬಡವರ ರಕ್ತವನ್ನು ಕುಡಿಯುವ ಮಧ್ಯಮವರ್ಗದವರ ಕನಸನ್ನು ನುಚ್ಚು ನೂರು ಮಾಡುವ ಅತ್ಯಂತ ಕೆಟ್ಟ ಸರಕಾರ ಇದಾಗಿದೆ. ಇಂತಹ ಹಿಂಸೆ ಕಿರುಕುಳ ತಮಗೆ ಯೋಗ್ಯವಲ್ಲ. ಕೆ ಎನ್ ರಾಜಣ್ಣ, ಕೃಷ್ಣಾ ಭೈರೇಗೌಡರು ಆನಂದ ಅಪ್ಪುಗೋಳನ ಆಸ್ತಿಯನ್ನು ಹರಾಜು ಹಾಕಿ ಎಲ್ಲ ಸ್ಥಿರ ಚರ ಆಸ್ತಿ ಜಪ್ತಿ ಮಾಡಿ ಅವನ ಬೇನಾಮಿ ಆಸ್ತಿ ಸರಕಾರ ಮುಟ್ಟುಗೋಲು ಹಾಕಿ, ಬಡವರ ಕಾರ್ಮಿಕರ ಮಧ್ಯಮ ವರ್ಗದವರ ಮಹಿಳೆಯರ ಹಣವನ್ನು ನ್ಯಾಯಾಲಯದ ಆದೇಶದಂತೆ ಮರು ಪಾವತಿಸಲು ಕೋರಿಕೆ.
—————————————————————
ನೊಂದ ಠೇವಣಿದಾರರು                                    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋ ಆಪರೇಟಿವ್ ಸೊಸೈಟಿ, ಬೆಳಗಾವಿ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಅಗತ್ಯ ದಾಖಲಾತಿಗಳನ್ನು ನೀಡಿ ಇ- ಆಸ್ತಿ ದಾಖಲಿಸಿಕೊಳ್ಳಿ-ತುಕಾರಾಮ ಮಾದರ

ಮೂಡಲಗಿ - ಪಟ್ಟಣದ ಪುರಸಭೆ ವ್ಯಾಪ್ತಿಯೊಳಗೆ ಬರುವ ಎಲ್ಲಾ ರೀತಿಯ ಕಟ್ಟಡ, ನಿವೇಶನಗಳಿಗೆ ಆಸ್ತಿ ತೆರಿಗೆಯನ್ನು ೨೦೨೪-೨೫ ನೇ ಸಾಲಿನ ಅಂತ್ಯದವರೆಗೆ ಪೂರ್ಣ ಪ್ರಮಾಣದಲ್ಲಿ ಪಾವತಿಸಿಕೊಂಡು...
- Advertisement -

More Articles Like This

- Advertisement -
close
error: Content is protected !!
Join WhatsApp Group