ಅದ್ದೂರಿ ಶಾಲಾರಂಭ ; ಹರ್ಷದಿಂದ ಮಕ್ಕಳನ್ನು ಸ್ವಾಗತಿಸಿದ ಶಾಲೆಗಳು !

Must Read

ಮೂಡಲಗಿ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಾರಂಭವು ಶೈಕ್ಷಣಿಕ ವಲಯದಲ್ಲಿ ಅದ್ಧೂರಿಯಾಗಿ ಜರುಗಿತು. ಮಕ್ಕಳ, ಪಾಲಕರ, ಶಿಕ್ಷಕರ ಹಾಗೂ ಸಮುದಾಯದ ಪಾಲ್ಗೊಳ್ಳುವಿಕೆಯು ಹರ್ಷದಾಯಕವಾಗಿತ್ತು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಸೋಮವಾರ ಜರುಗಿದ ಶಾಲಾ ಪ್ರಾರಂಭೋತ್ಸವ ಹಾಗೂ ಕಲಿಕಾ ಚೇತರಿಕೆ ಕಾರ್ಯಕ್ರಮ ನಿಮಿತ್ತ ಶೈಕ್ಷಣಿಕ ವಲಯದ ಪಟಗುಂದಿಯ ಸರಕಾರಿ ಹಿರಿಯ ಕನ್ನಡ ಮತ್ತು ಉರ್ದು ಶಾಲೆ, ಬಳೋಬಾಳ ಗ್ರಾಮದ ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲೆ, ಅನುದಾನಿತ ಎನ್.ಎಸ್.ಎಫ್ ಶಾಲೆಗಳಿಗೆ ಭೇಟಿ ನೀಡಿದರು.

ಮೂಡಲಗಿ ಶೈಕ್ಷಣಿಕ ವಲಯದ ಸರಕಾರಿ 235 ಪ್ರಾಥಮಿಕ, 34 ಪ್ರೌಢ, 8 ಮೊರಾರ್ಜಿ ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಾರಂಭವನ್ನು ಆಚರಿಸಲಾಯಿತು. ವಲಯಾದ್ಯಂತ ಶಾಲೆಗಳಲ್ಲಿ ತಳಿರು ತೋರಣ, ವಾದ್ಯ ಮೇಳಗಳೊಂದಿಗೆ ಪುಷ್ಪ ಅರ್ಚಣೆ, ಮಂಗಳಾರತಿಯೊಂದಿಗೆ ಮಕ್ಕಳನ್ನು ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ಅಣಿಗೊಳಿಸಿದ್ದು, ವಿಶೇಷವಾಗಿ ಕೆಲವು ಕಡೆ ಬೆಳ್ಳಿರಥ, ಅಕ್ಷರ ಬಂಡಿ, ಪ್ರಭಾತ ಪೇರಿ, ಕುಂಭ ಮೇಳಗಳ ಮೂಲಕ ಶೈಕ್ಷಣಿಕ ಘೋಷವಾಕ್ಯಗಳೊಂದಿಗೆ ಮಕ್ಕಳನ್ನು ವಿನೂತನ ರೀತಿಯಲ್ಲಿ ಶಾಲೆಗೆ ಭರಮಾಡಿಕೊಂಡಿದ್ದಾರೆ ಎಂದರು.

ಕೋವಿಡ್-19 ಹಾವಳಿಯಿಂದಾಗಿ ಮಕ್ಕಳ ಕಲಿಕೆ ಮೇಲೆ ಪರಿಣಾಮವಾಗಿತ್ತು. ಪ್ರಸಕ್ತ ಸಾಲಿನಲ್ಲಿ ಫಲಪ್ರದ ಕಲಿಕೆಯಾಗುವ ನಿಟ್ಟಿನಲ್ಲಿ ಸರಕಾರವು ಯೋಜನೆ ಹಾಕಿರುವ ವಿಶೇಷ ಕಲಿಕಾ ಚೇತರಿಕೆ ಕಾರ್ಯಕ್ರಮದ ಮೂಲಕ ಮಕ್ಕಳನ್ನು ಶೈಕ್ಷಣಿಕವಾಗಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವದಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ರಂತೆ 2022-23ರನ್ನು ಕಲಿಕಾ ಚೇತರಿಕೆ ವರ್ಷವಾಗಿದೆ. ಮಳೆಬಿಲ್ಲು ಕಾರ್ಯಕ್ರಮದ ಮೂಲಕ 14 ದಿನಗಳವರೆಗೆ ಮಕ್ಕಳಿಗೆ ಆಟದ ಹಬ್ಬ, ಆಟಿಕೆ ತಯಾರಿಕೆ, ನಾಟಕ, ಕಲಾ, ಚಿತ್ರ, ಕಥೆ ಕವಿತೆ ಗಣಿತ ಗಮ್ಮತ್ತು, ವಿಜ್ಞಾನ ಗೊಂಚಲು, ಸಾಂಸ್ಕೃತಿಕ ಸಂಭ್ರಮಗಳಂತಹ ವಿನೂತನ ಕಾರ್ಯಚಟುವಟಿಕೆಗಳು ನಡೆಯುತ್ತವೆ. ವಿದ್ಯಾರ್ಥಿಗಳ ಜ್ಞಾನಾರ್ಜನೆಯ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಯಾಗುವಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವದಾಗಿ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದ್ದಾರೆ.

ಶೈಕ್ಷಣಿಕ ವಲಯದಲ್ಲಿ ಮದ್ಯಾಹ್ನ ಉಪಹಾರ ಯೋಜನೆಯಡಿ ಸಿಹಿಯೂಟ, ವಿವಿಧ ಖಾದ್ಯ, ಬಿಸಿಯೂಟ ನೀಡಿದ್ದಾರೆ. ಮನೆಮನೆಗಳಿಗೆ ಕರಪತ್ರ, ಶಿಕ್ಷಣದ ಕುರಿತಾದ ಘೋಷವಾಕ್ಯಗಳನ್ನು ಚುನಾಯಿತ ಪ್ರತಿನಿಧಿಗಳು, ಎಸ್.ಡಿ.ಎಮ್.ಸಿ ಪದಾಧಿಕಾರಿಗಳು, ಬಿ.ಆರ್.ಪಿ, ಸಿ.ಆರ್.ಪಿ, ಮುಖ್ಯ ಶಿಕ್ಷಕರು, ಶಿಕ್ಷಕರು, ಅಡುಗೆ ಸಿಬ್ಬಂದಿಯವರು ಭಾಗವಹಿಸುವ ಮೂಲಕ ಶೈಕ್ಷಣಿಕ ವರ್ಷಾರಂಭಕ್ಕೆ ಸಹಕಾರ ನೀಡಿದರು.

ಈ ಸಂದರ್ಭದಲ್ಲಿ ತಾಲೂಕಾ ದೈಹಿಕ ಪರಿವೀಕ್ಷಕ ಎ.ಎ ಜುನೇದಿ ಪಟೇಲ್, ಶಿಕ್ಷಣ ಸಂಯೋಜಕ ಸತೀಶ ಬಿ.ಎಸ್ ಹಾಗೂ ಕಛೇರಿ ಸಿಬ್ಬಂದಿಯವರು ವಲಯ ವ್ಯಾಪ್ತಿಯ ಶಾಲೆಗಳಗೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group