ಅವರಾದಿಯಲ್ಲಿ ಹನುಮಾನ ಮೂರ್ತಿ ಪ್ರತಿಷ್ಠಾಪನೆ

Must Read

ಮೂಡಲಗಿ: ತಾಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ಸೇವಾ ಸಮಿತಿ ಆಶ್ರಯದಲ್ಲಿ ಶ್ರೀ ಹನುಮಾನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಎ.25 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಜರುಗಲಿದೆ.

ಎ.25 ರಂದು ಬೆಳಿಗ್ಗೆ 5-05ಕ್ಕೆ ಶ್ರೀ ಹನುಮಂತ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹೋಮ ಹವನ, ರುದ್ರಾಭಿಷೇಕ ಜರುಗುವುದು. 10 ಗಂಟೆಗೆ ಜರುಗುವ ಸಮಾರಂಭದ ಸಾನ್ನಿಧ್ಯವನ್ನು ಮರೆಗುದ್ದಿಯ ಡಾ.ನಿರುಪಾದೇಶ್ವರ ಮಹಾಸ್ವಾಮಿಗಳು ವಹಿಸುವರು, ಕಲಬುರ್ಗಿ ಜಿಲ್ಲೆ ಕುಂದಗೊಳದ ಶ್ರೀ ಸಿದ್ಧರಾಮ ಮಹಾಸ್ವಾಮಿಗಳು ಜ್ಯೋತಿ ಬೆಳಗಿಸುವರು, ಶ್ರೀ ಗಂಗಾಧರ ಹಿರೇಮಠ ಶ್ರೀಗಳು ಮತ್ತು ಸೋಮಯ್ಯ ಹಿರೇಮಠ ಶ್ರೀಗಳು, ಮಹಾಂತಯ್ಯಾ ಬ. ಹಿರೇಮಠ ಶ್ರೀಗಳು ಉಪಸ್ಥಿತರಿರುವರು, ಕಹಾಮ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಸಂಸದರು ಹಾಗೂ ಶಾಸಕರು, ರಾಜಕೀಯ ಮುಖಂಡರು, ಅಧಿಕಾರಿಗಳು, ಹಿರಿಯರು ಭಾಗವಹಿಸುವರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group