ರಾಷ್ಟ್ರೀಯ ಅಂಗವಿಕಲರ ಕ್ರಿಕೆಟ್ ಟೂರ್ನಾಮೆಂಟಿಗೆ ಹನುಮಂತ ಹಾವಣ್ಣವರ

Must Read

ಮೂಡಲಗಿ: ರಾಜಸ್ಥಾನದ ಉದಯಪೂರದಲ್ಲಿ ಡಿ. ೨೫ ರಿಂದ ಜರುಗಲಿರುವ ಅಂಗವಿಕಲರ ರಾಷ್ಟ್ರೀಯ ವಿಲ್‌ಚೇರ್ ಕ್ರಿಕೆಟ್ ಟೂರ್ನಾಮೆಂಟಿಗೆ ತಾಲೂಕಿನ ಗುಲಗಂಜಿಕೊಪ್ಪದ ಹನುಮಂತ ಹಾವಣ್ಣವರ ಕರ್ನಾಟಕ ತಂಡದಲ್ಲಿ ಪ್ರತಿನಿಧಿಸುವ ಮೂಲಕ ಗ್ರಾಮೀಣ ಮಟ್ಟದಲ್ಲಿದ್ದರು ವಿಶೇಷ ಕ್ರೀಡಾ ಪ್ರತಿಭೆಗೆ ಅವಕಾಶ ಸಿಕ್ಕಂತಾಗಿದೆ.

ಮೂಲತಃ ಕೃಷಿ ಕುಟುಂಬದಿoದ ಬಂದ ಹನುಮಂತ ಹಾವಣ್ಣವರ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವದರಿoದ ಅಂಗವಿಕಲನಾದರೂ ಛಲಬಿಡದೆ ಪ್ರಯತ್ನ ಪಟ್ಟು ಕರ್ನಾಟಕ ತಂಡದಲ್ಲಿ ಪ್ರತಿನಿಧಿಸುವದು ಹೆಮ್ಮೆಯ ವಿಷಯವಾಗಿದೆ. ಪ್ರಸ್ತುತ ಗ್ರಾಮ ಪಂಚಾಯತ ಸದಸ್ಯರಾಗಿದ್ದು ಅನೇಕ ಸಾರ್ವಜನಿಕ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಅರಭಾಂವಿ ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿಯವರು ಇವರ ಕ್ರೀಡಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group