spot_img
spot_img

ಖರ್ಗೆ ಆಯ್ಕೆ ಖುಷಿ ತಂದಿದೆ – ಅಶೋಕ ಮನಗೂಳಿ

Must Read

- Advertisement -

ಸಿಂದಗಿ– ರಾಷ್ಟ್ರೀಯ ಕಾಂಗ್ರೆಸ್‍ನ ನೂತನ ಸಾರಥಿಯಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರು 7 ಸಾವಿರಕ್ಕೂ ಅಧಿಕ ಮತಗಳಿಂದ ಅಭೂತ ಪೂರ್ವ ಜಯಗಳಿಸಿದ್ದು ಅವರ ಗೆಲುವು ನಮಗೆಲ್ಲ ಖುಷಿ ತಂದಿದೆ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಒಬ್ಬ ಸಮರ್ಥ ಹೋರಾಟಗಾರ ಹಾಗೂ ರಾಜಕಾರಣಿ ಅವರ ಪ್ರತಿಭೆ, ಚಾಣಕ್ಯತನ ಹಾಗೂ ಅನುಭವವನ್ನು ಮೈಗೂಡಿಸಿಕೊಂಡ ಅವರು ಕಾಂಗ್ರೆಸ್ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನೆಡೆಸುವ ಶಕ್ತಿ ಹೊಂದಿದ್ದಾರೆ. ಇಂದಿನ ಯುವ ರಾಜಕಾರಣಿಗಳಿಗೆ ಖರ್ಗೆ ಅವರು ಆದರ್ಶರಾಗಿದ್ದಾರೆ.

ಅವರು ಕನ್ನಡಿಗ ಎನ್ನುವುದೆ ಬಹು ದೊಡ್ಡ ಹೆಮ್ಮೆಯ ಸಂಗತಿ. ಅವರ ನಾಯಕತ್ವ ಹಾಗೂ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷ ಮುಂಬರುವ ಕರ್ನಾಟಕದ ವಿಧಾನ ಸಭೆ ಚುಣಾವಣೆಯಲ್ಲಿ ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರ ವಹಿಸಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group