- Advertisement -
ಬೆಳಗಾವಿ : ಬಿಜೆಪಿ ಪಕ್ಷದ ಹಿರಿಯ ನಾಯಕರು ಹಾಗೂ ಹಾವೇರಿ ಶಾಸಕ ನೆಹರು ಓಲೇಕಾರ ಅವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ಛಲವಾದಿ ಮಹಾಸಭಾ ಸಂಘದ ಸದಸ್ಯರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಅಖಂಡ ಭಾರತಕ್ಕೆ ಸಂವಿಧಾನವನ್ನು ಕೊಟ್ಟಿರುವಂತಹ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯದವರಾಗಿರುವ ಮತ್ತು ಕರ್ನಾಟಕ ರಾಜ್ಯದಲ್ಲಿ ದಲಿತರ ಜನಸಂಖ್ಯೆಯಲ್ಲಿ 40 ಲಕ್ಷಕ್ಕಿಂತ ಅಧಿಕ ಛಲವಾದಿ ಸಮುದಾಯದವರು ಇದ್ದಾರೆ. ಆದರೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನವನ್ನು ಬಿಜೆಪಿ ಇಲ್ಲಿಯವರೆಗೂ ನೀಡಿಲ್ಲ. ಸಮಾಜದ ಅಭಿವೃದ್ಧಿಗೊಸ್ಕರ ಪಕ್ಷದ ಹಿತದೃಷ್ಟಿಯಿಂದ ನಮ್ಮ ಸಮಾಜದ ಮುಖಂಡರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಾರಾಯಣ ಛಲವಾದಿ, ಮೋಹನ ಕಂಗ್ರಾಳಕರ, ಕೃಷ್ಣಾ ಕಾಂಬಳೆ, ಪರಶುರಾಮ ಕಾಂಬಳೆ, ದೀಪಕ ಮೇತ್ರಿ, ಮಾಂತೇಶ ಬಾಂದೇಶಕರ, ದುರ್ಗೇಶ್ ಮೇತ್ರಿ ಸೇರಿದಂತೆ ಬೆಳಗಾವಿ ಛಲವಾದಿ ಮಹಾಸಭಾ ಸಂಘದ ಸದಸ್ಯರು ಇದ್ದರು.