ಮೂಡಲಗಿ: ತಾಲ್ಲೂಕಿನ ಅರಭಾವಿಮಠದ ಜಗದ್ಗುರು ದುರುದುಂಡೀಶ್ವರ ಸಿದ್ಧಸಂಸ್ಥಾನ ಮಠದ ಲಿಂಗೈಕ್ಯ ಸಿದ್ಧಲಿಂಗ ಸ್ವಾಮೀಗಳ ೨ನೇ ಪುಣ್ಯಸ್ಮರಣೋತ್ಸವ ಹಾಗೂ ಶಿವಾನುಭವ ಕಾರ್ಯಕ್ರಮವನ್ನು ಸೆ.೨೧ರಂದು ಸಂಜೆ ೬ಕ್ಕೆ ಏರ್ಪಡಿಸಿರುವರು.
ಸಮಾರಂಭದ ಸಾನ್ನಿಧ್ಯವನ್ನು ಅರಭಾವಿಯ ದುರದುಂಡೀಶ್ವರ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ವಹಿಸುವರು.
ಕಡಕೋಳದ ವಿರಕ್ತಮಠದ ಸಚ್ಚಿದಾನಂದ ಸ್ವಾಮೀಜಿ, ಬೆಲ್ಲದ ಬಾಗೇವಾಡಿಯ ಶಿವಾನಂದ ಸ್ವಾಮೀಜಿ, ಹುಕ್ಕೇರಿಯ ಶಿವಬಸವ ಸ್ವಾಮೀಜಿ ಸಮ್ಮುಖವಹಿಸುವರು.
ಸೆ. ೨೨ರಂದು ಬೆಳಿಗ್ಗೆ ೮ಕ್ಕೆ ಸಿದ್ಧಲಿಂಗ ಸ್ವಾಮೀಜಿಯವರ ಗದ್ದುಗೆಗೆ ಪೂಜೆ, ಅಭಿಷೇಕ ಜರುಗುವುದು. ಬೆಳಿಗ್ಗೆ ೧೧ರಿಂದ ಮಹಾಪ್ರಸಾದ ಇರುವುದು ಎಂದು ಸಮಿತಿಯವರು ತಿಳಿಸಿದ್ದಾರೆ.

