ಫೋಟೋ; ಸಂತೋಷ ಪಾಟೀಲ ಅಭಿಮಾನಿ ಬಳಗ ಹಾಗೂ ಗೆಳೆಯರ ಬಳಗ ಸಹಯೋಗದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ವಾಲಪೋಸ್ಟರ್ ಪ್ರದರ್ಶಿಸಿದರು.
ಸಿಂದಗಿ: ಡಿ.12 ರಂದು ಕರವೇ ಬಳಗ ಹಾಗೂ ಗೆಳೆಯರ ಬಳಗದ ವತಿಯಿಂದ ಕರ್ನಾಟಕ ರಕ್ಷಣಾ ವೇದಿಕೆಯ ಉತ್ತರ ಕರ್ನಾಟಕ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಅವರ ಜನ್ಮದಿನದ ಪ್ರಯುಕ್ತ ಬಿಎಲ್ಡಿಇ ಡೀಮ್ಸ್ ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ ವೈದಕೀಯ ಮಹಾವಿದ್ಯಾಲಯದ ಆಸ್ಪತ್ರೆ ವಿಜಯಪುರ, ಸಪ್ತಗಿರಿ ಆಸ್ಪತ್ರೆ ಬೆಂಗಳೂರ, ಅನುಗ್ರಹ ಕಣ್ಣಿನ ಆಸ್ಪತ್ರೆ ಹಾಗೂ ಸುಬೇದಾರ ಆಸ್ಪತ್ರೆ ಶಹಾಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದ್ದು ಈ ಶಿಬಿರಕ್ಕೆ ಸುಮಾರು 4ರಿಂದ 5 ಸಾವಿರ ಜನರು ಸೇರುವ ನಿರೀಕ್ಷೆಯಿದೆ ಎಂದು ಗೆಳೆಯರ ಬಳಗದ ಸಿದ್ದು ಬುಳ್ಳಾ ಹೇಳಿದರು.
ಪಟ್ಟಣದ ಖಾಸಗಿ ಹೊಟೇಲೊಂದರಲ್ಲಿ ಕರವೇ ಬಳಗ ಹಾಗೂ ಗೆಳೆಯರ ಬಳಗ ಜಂಟಿಯಾಗಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಕಾರ್ಯಕ್ರಮದಲ್ಲಿ ಸುಮಾರು 400ಕ್ಕೂ ಅಭಿಮಾನಿಗಳು ರಕ್ತ ನೀಡುವ ಮೂಲಕ ರಕ್ತದಾನ ಶಿಬಿರ, ಹೃದಯರೋಗ ತಜ್ಞ ವೈದ್ಯರ ಸಲಹೆ ಮೇರೆಗೆ ಶಿಬಿರದಲ್ಲಿ ಬಿಪಿ, ಇಸಿಜಿ, 2ಡಿ ಎಕೋ ಸ್ಕ್ಯಾನಿಂಗ್ ಉಚಿತವಾಗಿ ಮಾಡಲಾಗುವುದು. ಅಲ್ಲದೆ ಪರಿಸರ ರಕ್ಷಣೆಗಾಗಿ ಸಸಿ ನೆಡುವ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ, ಕಡುಬಡವರಿಗೆ ಬಟ್ಟೆ ವಿತರಣೆ ಕಾರ್ಯಕ್ರಮ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಮತ್ತು ಸಂಜೆ ಝೀ ವಾಹಿನಿಯ ಕಲಾವಿದರಾದ ಸಹನಾ ಸೈಯದ, ಸಂಜು ಬಸಯ್ಯ, ಪೃಥ್ವಿ ಮಠ ನೇತೃತ್ವದಲ್ಲಿ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.ಕೂಡಲಸಂಗಮದ ಜಗದ್ಗುರು ಜಯಬಸವ ಮೃತ್ಯುಂಜಯ ಮಹಾಸ್ವಾಮಿಗಳು, ಗೋಲಗೆರಿ ವಿರಕ್ತಮಠದ ಸಿದ್ದಲಿಂಗ ಸ್ವಾಮಿಗಳ, ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಶಾಸಕ ರಮೇಶ ಭೂಸನುರ ಅವರ ಅಧ್ಯಕ್ಷತೆಯಲ್ಲಿ ಸಂಸದ ರಮೇಶ ಜಿಗಜೀಣಗಿ ಸೇರಿದಂತೆ ಅನೇಕ ನಾಯಕರು ಆಗಮಿಸಲಿದ್ದಾರೆ. ಗೋಲಗೇರಿ ಜಿಪಂ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳಿಗೆ ವಾಹನದ ಸೌಲಭ್ಯ ಒದಗಿಸಲಾಗಿದೆ ಕಾರಣ ಸಾರ್ವಜನಿಕರು ಬೃಹತ್ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಸಂದೀಪ ಚೌರ, ಮಾಜಿ.ತಾಪಂ ಸದಸ್ಯ ಶ್ರೀಶೈಲ ಚಳ್ಳಗಿ, ರವಿಕಾಂತ ನಾಯ್ಕೋಡಿ, ಮಲ್ಲನಗೌಡ ಬಗಲಿ, ತನ್ವೀರ ಬೈರಾಮಡಗಿ, ಚೇತನ ರಾಂಪೂರ, ಶ್ರೀಕಾಂತ ಬಿಜಾಪುರ ಸೇರಿದಂತೆ ಹಲವರು ಇದ್ದರು.