ಕನ್ನಡಿಗರು ಜಾಗೃತರಾಗದಿದ್ದರೆ ನಾಡು ನುಡಿಗೆ ಧಕ್ಕೆ – ಡಾ. ಭೇರ್ಯ ರಾಮಕುಮಾರ್

Must Read

ಕನ್ನಡಿಗರು ಜಾಗೃತರಾಗದಿದ್ದರೆ ಬೆಂಗಳೂರು ನಗರ ಹಾಗೂ ಬೆಳಗಾವಿಯ ಗಡಿ ಪ್ರದೇಶಗಳಲ್ಲಿ ಕನ್ನಡ ನಾಡು ನುಡಿಗಳ ಸಾರ್ವಭೌಮಾತೆಗೆ ಧಕ್ಕೆ ಉಂಟಾಗುವುದು ಖಚಿತ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಭೇರ್ಯ  ರಾಮಕುಮಾರ್ ಆತಂಕ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದ ಅವರು ಅಂತಾರಾಷ್ಟ್ರೀಯ ಕಂಪನಿಗಳ ಫಲವಾಗಿ ಕರ್ನಾಟಕ ದ  ರಾಜಧಾನಿಯಲ್ಲಿ ಅನ್ಯರಾಜ್ಯಗಳ ಜನತೆ ಹೆಚ್ಚುತ್ತಿದ್ದಾರೆ. ಕನ್ನಡ ನೆಲ, ಜಲ ಬಳಸುವ ಇವರು  ಕನ್ನಡ ಭಾಷೆ ಕಲಿಕೆ ಬಗ್ಗೆ ತೀವ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಪರಿಸ್ಥಿತಿ ಹೀಗೇ ಮುಂದುವರೆದರೆ ಕನ್ನಡ ನಾಡಿನ ರಾಜಧಾನಿಯಲ್ಲಿ ಕನ್ನಡಿಗರೇ ಅಲ್ಪ ಸಂಖ್ಯಾತರಾಗುವ ಸಂಭವ ಇದೆ. ಕನ್ನಡ ಕಣ್ಮರೆಯಾಗುವ ಸಾಧ್ಯತೆ ಯೂ ಇದೆ ಎಂದು  ನುಡಿದರು.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿಯ ಕಾರಟಗಿ ಗ್ರಾಮದಲ್ಲಿ  ನೂತನ ಕನ್ನಡ ಶಾಲೆಯ  ಶಂಕುಸ್ಥಾಪನೆ  ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ  ಅನ್ಯಭಾಷೆಯವರ ಕೃತ್ಯವನ್ನು ಖಂಡಿಸಿದ ಅವರು ಗಡಿನಾಡ  ಕನ್ನಡಿಗರ ಸಮಸ್ಯೆ ಗಳಿಗೆ ರಾಜ್ಯಸರ್ಕಾರ, ಕನ್ನಡ ಸಾಹಿತಿಗಳು, ಕನ್ನಡ ಪರ ಚಿಂತಕರು ಧ್ವನಿಯಾಗಬೇಕು ಎಂದು ನುಡಿದರು.

ಸಾಲಿಗ್ರಾಮ ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಮಧುಚಂದ್ರ ಅವರು ಮಾತನಾಡಿ, ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಗಳನ್ನು ಪ್ಪ್ರೋತ್ಸಾಹಿಸುವ ಸಲುವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ  ವಿತರಿಸಲಾಗುತ್ತಿದೆ. ಅದೇ ರೀತಿ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಎಲೆಮರೆಯ ಕಾಯಿಗಳಂತೆ ಯಾವುದೇ ಪ್ರಚಾರ ಬಯಸದೆ ನಾಡು ನುಡಿ ಸೇವೆ ಮಾಡುತ್ತಿರುವ ಸಾಧಕರನ್ನು ಗುರ್ತಿಸಲಾಗುತ್ತಿದೆ  ಎಂದು ನುಡಿದರು.

ಉಪನ್ಯಾಸಕರಾದ ಡಾ ಸಿ. ಡಿ.ಪರಶುರಾಮ್ ,ನಿವೃತ್ತ ಉಪನ್ಯಾಸಕರಾದ ಎಸ್. ಅರ್. ರಾಮೇಗೌಡ, ಮಿಥಿಲ  ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ. ಬಿ. ಲೋಕನಾಥ್ ಕನ್ನಡ ನಾಡುನುಡಿ ಕುರಿತು ಮಾತನಾಡಿದರು.

ವಿವಿಧ ಕ್ಷೇತ್ರಗಳ ಸಾಧಕರುಗಳಾದ ಮೈಸೂರು ವಿ.ವಿ.ನಿಲಯದ ಪ್ರಾಧ್ಯಾಪಕ ಡಾ.ಸಿ.ಡಿ.ಪರಶುರಾಮ್, ಆಂದೋಲನ ಪ್ರತಿನಿಧಿ ಕೆ.ಟಿ.ಮೋಹನ್ ಕುಮಾರ್, ದಿವ್ಯ ಜ್ಯೋತಿ ರವಿ, ಗೋಪಿ, 

ಇಂದ್ರಕುಮಾರ್, ಪಳನಿ, ಲೀಲಾವತಿ, ಚಂದ್ರಶೇಖರಯ್ಯ, ಮಾರುತಿ, ರಾಮ್ ಜಿಂಗ್ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಕಸಾಪ ಪ್ರಧಾನ ಕಾರ್ಯದರ್ಶಿ ಕೆ.ಸಿ.ಮಹದೇವ್, ಗ್ರಾ.ಪಂ.ಅಧ್ಯಕ್ಷೆ ಫಾತಿಮಾ, ಮಾಜಿ ಅಧ್ಯಕ್ಷರಾದ ಎಸ್.ಆರ್.ದಿನೇಶ್, 

ಎಸ್.ಆರ್.ಪ್ರಕಾಶ್, ಉಪಾಧ್ಯಕ್ಷೆ ಶಶಿಕಲಾ, ಮಾಜಿ ಉಪಾಧ್ಯಕ್ಷರಾದ ಸುಧಾ ರೇವಣ್ಣ, ಸುಮಾ ಶಿವಕುಮಾರ್, ಸದಸ್ಯ ಗಂಗಾಧರ,  ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಬಿ.ಶೇಖರ್, ವಿ ಎಸ್ ಎಸ್ ಬಿ ಎನ್ ಮಾಜಿ ಅಧ್ಯಕ್ಷ ಪಾಪಣ್ಣ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ಮುಖಂಡರುಗಳಾದ ಪ್ರೇಮ್ ಕುಮಾರ್ ಜೈನ್,  ಪೂರ್ಣಚಂದ್ರಗೌಡ, ಜೈನ ಸಮುದಾಯದ ಮುಖಂಡ ರಾಜಣ್ಣ, ಪ್ರದೀಪ್, ಶಿವರಾಜ್, ಗ್ರಂಥಪಾಲಕಿ ದಿವ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group