Homeಸುದ್ದಿಗಳುಜೀವನದಲ್ಲಿ ಶಿಕ್ಷಣದ ಮಹತ್ವ ಅಪಾರ - ಅಶೋಕ ಮನಗೂಳಿ

ಜೀವನದಲ್ಲಿ ಶಿಕ್ಷಣದ ಮಹತ್ವ ಅಪಾರ – ಅಶೋಕ ಮನಗೂಳಿ

ಸಿಂದಗಿ – ಜೀವನದಲ್ಲಿ ಶಿಕ್ಷಣದ ಮಹತ್ವ ಅಪಾರ. ಇದು ಜನರು ತಮ್ಮ ಜೀವನದುದ್ದಕ್ಕೂ ಗುಣಮಟ್ಟದ ಕಲಿಕೆಯನ್ನು ಸುಗಮಗೊಳಿಸುತ್ತದೆ. ಇದು ಜ್ಞಾನ, ನಂಬಿಕೆ, ಕೌಶಲ್ಯ, ಮೌಲ್ಯಗಳು ಮತ್ತು ನೈತಿಕ ಅಭ್ಯಾಸಗಳನ್ನು ಕಲಿಸುತ್ತದೆ. ಇದು ಜೀವನ ವಿಧಾನವನ್ನು ಸುಧಾರಿಸುತ್ತದೆ ಮತ್ತು ವ್ಯಕ್ತಿಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯನ್ನು ಹೆಚ್ಚಿಸುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಅವರು ತಾಲೂಕಿನ ಬೋರಗಿ ಗ್ರಾಮದಲ್ಲಿ ಸೋಮವಾರ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆ ಯನ್ನಾಗಿ ಉನ್ನತಿಕರಣ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ವಿಭಾಗ ಉದ್ಘಾಟಿಸಿ ಮತ್ತು ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿನ ಮಕ್ಕಳಿಗೆ ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಬಟ್ಟೆ ಹಾಗೂ ಪುಸ್ತಕ ವಿತರಣೆ ಮಾಡಿ ಮಾತನಾಡಿದರು.

ಉತ್ತಮ ಶಿಕ್ಷಣವು ಜ್ಞಾನದ ಸಂಪತ್ತಿಗೆ ಕಾರಣವಾಗುತ್ತದೆ ಮತ್ತು ಆ ಜ್ಞಾನವನ್ನು ಬಳಸಿಕೊಂಡು ಒಬ್ಬ ವ್ಯಕ್ತಿಯು ತನ್ನ ಕನಸುಗಳನ್ನು ಸಾಧಿಸಲು ಅನುವು ಮಾಡಿಕೊಡುತ್ತದೆ ಆದ್ದರಿಂದ ಇದು ಸಮೃದ್ಧ ಮತ್ತು ಸಾರ್ಥಕ ಜೀವನಕ್ಕೆ ಅತ್ಯಗತ್ಯ. ಅವರು ಗಳಿಸಿದ ಜ್ಞಾನದಿಂದ, ಒಬ್ಬ ವಿದ್ಯಾವಂತ ವ್ಯಕ್ತಿಯು ಸಮಸ್ಯೆಯನ್ನು ಸೂಕ್ತ ರೀತಿಯಲ್ಲಿ ಗುರುತಿಸಲು ಮತ್ತು ಸೂಕ್ತ ಪರಿಹಾರವನ್ನು ಒದಗಿಸಲು ಸಾಧ್ಯವಾಗುತ್ತದೆ.
ಸಿಂದಗಿ ಮತಕ್ಷೇತ್ರದಲ್ಲಿ ಒಟ್ಟು 11 ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಮತ್ತು ಎರಡು ಪ್ರಾಥಮಿಕ ಶಾಲೆಗಳನ್ನ ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಣ ಮಾಡಲಾಗಿದೆ. ರಾಜ್ಯ ಸರ್ಕಾರವು ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಒಲವನ್ನ ತೋರುತ್ತಲಿದೆ ಮುಂಬರುವ ದಿನಗಳಲ್ಲಿ ಶಿಕ್ಷಣ ಕ್ಷೇತ್ರವನ್ನ ಅತ್ಯಂತ ಪ್ರಬಲ ಕ್ಷೇತ್ರವನ್ನಾಗಿ ಮಾಡುವಲ್ಲಿ ಸರ್ಕಾರ ಪಣ ತೊಟ್ಟಿದೆ ಎಂದರು.

ಈ ಸಂದರ್ಭದಲ್ಲಿ ಸಿದ್ರಾಮಯ್ಯ ಸ್ವಾಮಿಗಳು ಬ್ಯಾಡಗಿಹಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ, ಶಾಲಾ ಮುಖ್ಯಗುರು ಎಲ್.ವಾಯ್. ಹಿಪ್ಪರಗಿ, ಜಿಲ್ಲಾ ಕೆಡಿಪಿ ಸದಸ್ಯ ಶಿವಣ್ಣ ಕೊಟರಗಸ್ತಿ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಮಲ್ಲಣ್ಣ ಸಾಲಿ, ಗ್ರಾಮ ಅಧ್ಯಕ್ಷರ ಪ್ರತಿನಿಧಿ ನಿತ್ಯಾನಂದ ಕಟ್ಟಿಮನಿ, ಶಂಕರೆಪ್ಪ ಸಾವಳಸಂಗ, ಸಿದಲಿಂಗ ಗುಂಡಾಪುರ, ರಮೇಶ ಗುಬ್ಬೆವಾಡ, ಎಪಿಎಂಸಿ ನಿರ್ದೇಶಕರ ಸದ್ದಾಂ ಗುಬ್ಬೆವಾಡ, ದಯಾನಂದ ನಾಲವಾರ, ಬಸವರಾಜ ಚಾವರ, ರಾಮಚಂದ್ರ ರಾಠೋಡ, ಬಸವರಾಜ ದ್ಯಾಪುರ, ಶಂಕರ ತೆಲಗಣಿ, ಅಶೋಕ ಬಿಜಾಪುರ, ವಿಶ್ವನಾಥ್ ಹಗಟಗಿ, ಸೇರಿದಂತೆ ಗ್ರಾಮಸ್ಥರು ಮುಖಂಡರು ಸೇರಿದಂತೆ ಮುದ್ದು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

error: Content is protected !!
Join WhatsApp Group