Homeಸುದ್ದಿಗಳುರೈತರಿಂದ ಆಕ್ಷೇಪಣೆ ಆಹ್ವಾನ

ರೈತರಿಂದ ಆಕ್ಷೇಪಣೆ ಆಹ್ವಾನ

ಸಿಂದಗಿ; 2018-19 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿದ ಸಿಂದಗಿ ಹಾಗೂ ದೇವರಹಿಪ್ಪರಗಿ ತಾಲೂಕಿನ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಒಟ್ಟು 606 ಅರ್ಜಿಗಳು ಯುನೈಟೆಡ್ ಇನ್ಸುರನ್ಸ್ ಕಂಪನಿಯಿಂದ ತಿರಸ್ಕೃತ ಗೊಂಡಿದ್ದು, ರೈತರ ವಿವರಗಳನ್ನು ಆಲಮೇಲ, ಸಿಂದಗಿ ಹಾಗೂ ದೇವರಹಿಪ್ಪರಗಿ ರೈತ ಸಂಪರ್ಕ ಕೇಂದ್ರಗಳಲ್ಲಿ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಸಿಂದಗಿಯಲ್ಲಿ ಸೂಚನಾ ಫಲಕಕ್ಕೆ ಲಗತ್ತಿಸಲಾಗಿದೆ.

ರೈತರ ಆಕ್ಷೇಪಣೆ ಇದ್ದಲ್ಲಿ 15 ದಿವಸಗಳ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಆಯಾ ರೈತ ಸಂಪರ್ಕ ಕೇಂದ್ರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸಹಾಯಕ ಕೃಷಿ ನಿರ್ದೇಶಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group