Homeಸುದ್ದಿಗಳುಸಹೃದಯ ಸಾಹಿತ್ಯ ಪ್ರತಿಷ್ಠಾನದ ಕಾವ್ಯ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಸಹೃದಯ ಸಾಹಿತ್ಯ ಪ್ರತಿಷ್ಠಾನದ ಕಾವ್ಯ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಸವದತ್ತಿ– ತಾಲೂಕಿನ ಸಹೃದಯ ಸಾಹಿತ್ಯ ಪ್ರತಿಷ್ಠಾನವು ೨೦೨೨ ರಲ್ಲಿ ಪ್ರಕಟವಾದ ಅತ್ಯುತ್ತಮ ಕವನ ಹಾಗೂ ಗಜಲ್ ಸಂಕಲನಗಳಿಗೆ ಕಾವ್ಯ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಲೇಖಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ.

ಕಾವ್ಯ ಪ್ರಶಸ್ತಿಯು ರೂ. ೫೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದ್ದು, ಆಸಕ್ತ ಲೇಖಕರು ೨೦೨೨ ರ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರಕಟವಾದ ತಮ್ಮ ಕವನ ಹಾಗೂ ಗಜಲ್ ಸಂಕಲನಗಳ ಮೂರು ಪ್ರತಿಗಳನ್ನು ಫೆಬ್ರುವರಿ ೧೫ರೊಳಗೆ ಕಳುಹಿಸಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ನಾಗೇಶ್ ಜೆ. ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪುಸ್ತಕಗಳನ್ನು ಕಳುಹಿಸಬೇಕಾದ ವಿಳಾಸ: ಸಹೃದಯ ಸಾಹಿತ್ಯ ಪ್ರತಿಷ್ಠಾನ(ರಿ), ‘ಅವ್ವ’ ಶಿವಬಸವ ನಗರ, ರಾಮಾಪೂರ ಸೈಟ್, ಸವದತ್ತಿ-೫೯೧೧೨೬ ಬೆಳಗಾವಿ ಜಿಲ್ಲೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ರಮೇಶ್ ತಳವಾರ (೯೯೪೫೦೪೨೭೩೭) ಅವರನ್ನು ಸಂಪರ್ಕಿಸಬಹುದು.

RELATED ARTICLES

Most Popular

error: Content is protected !!
Join WhatsApp Group