ರಸ್ತೆಯಲ್ಲಿ ಸಿಲುಕಿದ ಈಶ್ವರ ಖಂಡ್ರೆ ಕಾರು

Must Read

ಬೀದರ – ಹಿಂದುಳಿದ ಪ್ರದೇಶ ಎಂದು ಹಣೆ ಪಟ್ಟಿ ಹಚ್ಚಿಕೊಂಡಿರುವ ಜಿಲ್ಲೆ ಬೀದರ್ ನ ಔರಾದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರ ಕಾರು ರಸ್ತೆಯಲ್ಲಿ ಸಿಲುಕಿ ತಳ್ಳಿಸಿಕೊಂಡ ಘಟನೆ ವರದಿಯಾಗಿದೆ.

ಬೀದರ ಉಸ್ತುವಾರಿ ಸಚಿವರ ತವರೂರು ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗಿದ್ದ ಈಶ್ವರ ಖಂಡ್ರೆಯವರ ಇನ್ನೋವ ಗಾಡಿಯು ಕಚ್ಚಾ ರಸ್ತೆ ಬದಿಯಲ್ಲಿ ಸಿಲುಕಿಕೊಂಡ ಪ್ರಸಂಗ ನಡೆಯಿತು.

ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಖಂಡ್ರೆ ಪ್ರಚಾರಕ್ಕೆ ಕಮಲನಗರ ಮತ್ತು ಔರಾದ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಹೋಗುವ ಸಂದರ್ಭದಲ್ಲಿ ಹಳ್ಳಿಯ ರಸ್ತೆಯಲ್ಲಿ ಕಾರು ಸಿಲುಕಿಕೊಂಡಿತು. ಜಿಲ್ಲಾ ಉಸ್ತುವಾರಿ ಸಚಿವರ ಔರಾದ ಕ್ಷೇತ್ರದಲ್ಲಿಯೇ ರಸ್ತೆ ವ್ಯವಸ್ಥೆ ಹೀಗಿದೆಯೆಂದರೆ ಇನ್ನುಳಿದ ರಸ್ತೆಗಳ ಗತಿಯೇನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಉಸ್ತುವಾರಿ ಸಚಿವರು ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ ಎಂಬುದಾಗಿ ಈಶ್ವರ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು ಜೊತೆಯಲ್ಲಿ ಕಾಂಗ್ರೆಸ್ ಮುಖಂಡ ರಾಜಶೇಖರ ಪಾಟೀಲ ಇದ್ದರು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group