ಎನ್ ಡಿ ಡಿಬಿ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರಿಗೆ ಗೌರವ ಸಮರ್ಪಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

ಗುಜರಾತ್ (ಆನಂದ್ ನಗರ) ದಲ್ಲಿ ನಡೆಯುತ್ತಿರುವ NCDFI ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಭಾಗಿ

ಬೆಳಗಾವಿ : ಗುಜರಾತ್ ದಲ್ಲಿರುವ ಎನ್ಸಿಡಿಎಫ್ಐ ಹೊಸ ಕಟ್ಟಡ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎನ್ಡಿಡಿಬಿ ಚೇರಮನ್ನರೂ ಆಗಿರುವ ಡಾ. ಮೀನೇಶ್ ಭಾಯಿ ಷಾ ಅವರನ್ನು ಆಡಳಿತ ಮಂಡಳಿಯ ಸದಸ್ಯರು ಸತ್ಕರಿಸಿ, ಗೌರವಿಸಿದರು.

ಎನ್ಸಿಡಿಎಫ್ಐ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಸಂಸ್ಥೆಯ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರಿಗೆ ಇತರ ಆಡಳಿತ ಮಂಡಳಿಯ ಸದಸ್ಯರು ನಿನ್ನೆ ಸೋಮವಾರದಂದು ಜರುಗಿದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಬೆಳ್ಳಿಯ ಗಣೇಶನ ವಿಗ್ರಹವನ್ನು ನೀಡಿ ಗೌರವಿಸಿದರು.

ಎನ್ಸಿಡಿಎಫ್ಐ ಸಂಸ್ಥೆಯ ನೂತನ ಕಟ್ಟಡದ ನಿರ್ಮಾಣಕ್ಕಾಗಿ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರು ಅಪಾರವಾಗಿ ಶ್ರಮಿಸಿದ್ದಾರೆ. ಸುಮಾರು ೩೦ ಕೋಟಿ ರೂಪಾಯಿ ಮೌಲ್ಯದ ನೂತನ ಕಚೇರಿಯ ಅತ್ಯಾಧುನಿಕ ಕಟ್ಟಡವಾಗಲು ಡಾ. ಮೀನೇಶ್ ಭಾಯಿ ಅವರ ಶ್ರಮ ತುಂಬ ದೊಡ್ಡದಿದೆ. ತನು,ಮನ,ಧನದ ಸಹಾಯ ಮಾಡಿದ್ದಾರೆಂದು ಎನ್ಸಿಡಿಎಫ್ಐ ಸಂಸ್ಥೆಯ ನಿರ್ದೇಶಕರು ಇದೇ ಸಂದರ್ಭದಲ್ಲಿ ಡಾ. ಮೀನೇಶ್ ಭಾಯಿ ಅವರನ್ನು ಅಭಿನಂದಿಸಿ ಮಾತನಾಡಿದರು.

ಎನ್ಸಿಡಿಎಫ್ಐ ಸಂಸ್ಥೆಯ ಸಭೆಯಲ್ಲಿ ಕರ್ನಾಟಕದಿಂದ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮತ್ತು ಸಿಂಧನೂರಿನ ಮಾಜಿ ಶಾಸಕ ವೆಂಕಟರಾವ್ ನಾಡಗೌಡ ಅವರು ಭಾಗವಹಿಸಿ, ಎನ್ಸಿಡಿಎಫ್ಐ ನಡೆಸುತ್ತಿರುವ ಸರಣಿ ಸಭೆಗಳಲ್ಲಿ ಭಾಗವಹಿಸಿದ್ದಾರೆ.

ಈ ಸಂದರ್ಭದಲ್ಲಿ ಎನ್ಸಿಡಿಎಫ್ಐ ನಿರ್ದೇಶಕರಾದ ಮಂಗಲ್ ಜೀತ್ ರಾಯ್, ಶ್ಯಾಮಲ್ ಭಾಯಿ ಪಟೇಲ್, ಕೆ.ಎಸ್.ಮಣಿ, ನರೀಂದರ್ ಸಿಂಗ್ ಶರ್ಗಿಲ್ಲ್, ಎಸ್. ರಘುರಾಮ್, ಸಮೀರಕುಮಾರ ಫರೀದ, ಎಂಡಿ ಶ್ರೀನಿವಾಸ ಸಜ್ಜಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group