- Advertisement -
ಹಿರೇಬಾಗೇವಾಡಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ ಅಬ್ಬಿಗೇರಿ ಇವರು ಶ್ರೀ ಬುದ್ಧ ಬಸವ ಅಂಬೇಡ್ಕರ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರತಿಷಾನ(ರಿ) ನೀಡುವ ಬುದ್ಧ ಬಸವ ಅಂಬೇಡ್ಕರ ಶಾಂತಿ ಸೌಹಾರ್ದ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇವರ ಸಾಹಿತ್ಯ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಆಕ್ಟೋಬರ್ 17 ರಂದು ರವಿವಾರ ಬೆಳಿಗ್ಗೆ 10.30ಕ್ಕೆ ತಾಲೂಕ ಪಂಚಾಯತ ಸಭಾಭವನ ಅಥಣಿ ವೇದಿಕೆಯಲ್ಲಿ ಜರುಗಲಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ತಿಳಿಸಿರುವರು.