spot_img
spot_img

ಕೇಂದ್ರ ಕೃಷಿ ಸಚಿವರ ಭೇಟಿಯಾದ ಈರಣ್ಣ ಕಡಾಡಿ

Must Read

spot_img
- Advertisement -

ಮೂಡಲಗಿ: ದೇಶದ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಕುರಿತು ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ದ್ರಾಕ್ಷಿ ಬೆಳಗಾರರ ನಿಯೋಗದೊಂದಿಗೆ ಕೃಷಿ ಭವನದಲ್ಲಿ ಭೇಟಿಯಾಗಿ ಹಲವಾರು ವಿಷಯಗಳ ಕುರಿತು ಚರ್ಚಿಸಿದರು.

ಬರುವ ದಿನಗಳಲ್ಲಿ ದ್ರಾಕ್ಷಿ ಬೆಳಗಾರರ ಎಲ್ಲ ಸಮಸ್ಯೆಗಳ ನಿವಾರಣೆಗಾಗಿ ಅತಿ ಶೀಘ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಈ ನಿಯೋಗದಲ್ಲಿ ಅಥಣಿ ಮಾಜಿ ಶಾಸಕ ಶಹಜಹಾನ್ ಡೊಂಗರಗಾಂವ, ಚಿಕ್ಕೋಡಿ ಜಿಲ್ಲಾ ರೈತ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ಸಿದ್ದಪ್ಪ ಮುದಕನ್ನವರ್, ದ್ರಾಕ್ಷಿ ಬೆಳಗಾರರಾದ ಅಪ್ಪಾಸಾಬ್ ತೇರದಾಳ, ಶ್ರೀಕಾಂತ್ ಮಕಾನಿ, ಸುಭಾಸ ಮೋರೆ, ಸುರೇಶ ಅವಟಿ, ಪ್ರಕಾಶ ಪಾಟೀಲ್ ಉಪಸ್ಥಿತರಿದ್ದರು.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಅವ ಹಿಂದು ಅವ ಜೈನ ಅವ ಬೌದ್ಧ ಅವ ಸಿಖ್ಖ ಅವ ಕ್ರೈಸ್ತ ಅವ ಮಹಮದೀಯನೆಂದು ದಯಮಾಡಿ ಕರೆಯದಿರು ಬೇರೆಯವರೆನ್ನದಿರು ಅವರು ನಮ್ಮವರೆನ್ನು - ಎಮ್ಮೆತಮ್ಮ ಶಬ್ಧಾರ್ಥ ಮಹಮದೀಯ‌ = ಮುಸಲ್ಮಾನ ತಾತ್ಪರ್ಯ ಜಗತ್ತಿನಲ್ಲಿ‌ ಹಿಂದು‌,...
- Advertisement -

More Articles Like This

- Advertisement -
close
error: Content is protected !!
Join WhatsApp Group