ಕಲೆಯಲ್ಲಿ ಕಮಾಲ್. ಕಲಾಶ್ರೀ ಪ್ರಶಸ್ತಿಗೆ ಕಂದಗಲ್ಲದ ಹುಡುಗ.

Must Read

ಬಾಗಲಕೋಟೆ : ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ಸರಕಾರಿ ಪ್ರೌಢ ಶಾಲೆ 9 ನೇ ತರಗತಿ ವಿದ್ಯಾರ್ಥಿ ಮಹೇಶ ಎಚ್ ಕರಡಿ ಸೃಜನಾತ್ಮಕ ಕಲೆ ಸ್ಪರ್ಧೆಯಲ್ಲಿ ಬಾಗಲಕೋಟೆ ಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಬಾಗಲಕೋಟ ಜಿಲ್ಲೆಯಿಂದ ಪ್ರತಿನಿಧಿಸಿ ಬೆಂಗಳೂರಿನ ಬಾಲ ಭವನ ಸೊಸೈಟಿಯಲ್ಲಿ ನೆಡೆದ ಸೃಜನಾತ್ಮಕ ಕಲೆಯಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದು ಬಾಗಲಕೋಟ ಜಿಲ್ಲೆ ಹಾಗೂ ಕಂದಗಲ್ಲ ಗ್ರಾಮದ ಸರಕಾರಿ ಪ್ರೌಢ ಶಾಲೆ ಮತ್ತು ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ್ದಾನೆ.

ವಿದ್ಯಾರ್ಥಿ ಮತ್ತು ಮಾರ್ಗದರ್ಶನ ಮಾಡಿದ ಚಿತ್ರಕಲಾ ಶಿಕ್ಷಕರಾದ ಎಸ್ ಎಸ್ ಗೌಡರ ಗುರುಗಳನ್ನು ಇಲಕಲ್ಲ ಹುನಗುಂದ ಅವಳಿ ತಾಲೂಕು ಹಾಗೂ ಬಾಗಲಕೋಟ ಜಿಲ್ಲೆಯ ಎಲ್ಲಾ ಚಿತ್ರಕಲಾ ಶಿಕ್ಷಕರು ಗ್ರಾಮದ ಸರಕಾರಿ ಪ್ರೌಢ ಶಾಲೆ ಎಸ್ ಡಿ ಎಂ ಸಿ ಯವರು ಎಲ್ಲ ಶಾಲೆಯ ಗುರುಗಳು ಶಿಕ್ಷಣ ಪ್ರೇಮಿಗಳು ಗ್ರಾಮಸ್ಥರು ಪರವಾಗಿ ಅಭಿನಂದಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group