ಬೀದರ್ ಕೋಟೆಯಲ್ಲಿ ಮೊಳಗಿದ ಕನ್ನಡ ಡಿಂಡಿಮ

Must Read

ಬಿದರಿ ಸಾಂಸ್ಕೃತಿಕ ವೇದಿಕೆಯಿಂದ ಕೋಟಿ ಕಂಠ ಗಾಯನ

ಬೀದರ: ಐತಿಹಾಸಿಕ ಬೀದರ್ ಕೋಟೆಯ ಆವರಣದಲ್ಲಿ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಮಾತಾಡ್ ಮಾತಾಡ್ ಕನ್ನಡ, ಕೋಟಿ ಕಂಠ ಗಾಯನ ಐತಿಹಾಸಿಕ ಸ್ಮಾರಕ ಸ್ಥಳಗಳ ಬೀಡಾದ ಕೋಟೆಯಲ್ಲಿ ಕನ್ನಡದ ಹಾಡುಗಳನ್ನು ಮೊಳಗಿಸುವಲ್ಲಿ ಇಲ್ಲಿನ ‘ಬಿದರಿ ಬೀದರ್ ಜಿಲ್ಲೆಯ ಸಾಂಸ್ಕೃತಿಕ ವೇದಿಕೆಯು’ ಶಾಹೀನ ಶಿಕ್ಷಣ ಸಂಸ್ಥೆಯ ಸಹಕಾರದೊಂದಿಗೆ ಅದ್ಧೂರಿ ಯಶಸ್ವಿ ಕಂಡಿತು.

‘ಬಿದರಿ ಬೀದರ್ ಜಿಲ್ಲೆಯ ಸಾಂಸ್ಕೃತಿಕ ವೇದಿಕೆ’ ಯ ಅಧ್ಯಕ್ಷರಾದ ಖ್ಯಾತ ಗಾಯಕಿ ಶ್ರೀಮತಿ ರೇಖಾ ಅಪ್ಪಾರಾವ್ ಸೌದಿ ಅವರ ನೇತೃತ್ವದಲ್ಲಿ ಜಿಲ್ಲೆಯ ಶಾಹೀನ ಶಿಕ್ಷಣ ಸಂಸ್ಥೆ  ಸಹಯೋಗದಲ್ಲಿ ಸುಮಾರು ಒಂದೂವರೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಕನ್ನಡ ಪ್ರೇಮಿಗಳು ಈ ಅಮೃತ ಘಳಿಗೆಯಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಿದರು.

ಕುವೆಂಪು ರಚಿತ ನಾಡಗೀತೆಯಿಂದ ಆರಂಭಾವಾದ ಗಾಯನದಲ್ಲಿ ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ಅವರ ಕನ್ನಡ ಡಿಂಡಿಮ, ಡಿ.ಎಸ್ ಕರ್ಕಿ ಅವರ ಹಚ್ಚೇವು ಕನ್ನಡದ ದೀಪ, ಚೆನ್ನವೀರ ಕಣವಿ ಅವರ ವಿಶ್ವ ವಿನೂತನ ಹಾಗೂ ಹಂಸಲೇಖಾ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳನ್ನು ಸಾವಿರಾರು ವಿದ್ಯಾರ್ಥಿಗಳ ಕಂಠದಿಂದ ಇಡೀ ಕೋಟೆಯ ಆವರಣದಲ್ಲಿ ಮೊಳಗಿತು.

ಈ ಸಂದರ್ಭದಲ್ಲಿ ಸಂಕಲ್ಪ ವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆಯ ಮಾಹೇರ್ ಮೇಡಂ, ಹಿರಿಯ ಜಾನಪದ ಗಾಯಕರಾದ ಶಂಭುಲಿಂಗ ವಾಲ್ದೊಡ್ಡಿ, ಪಶು ವೈದ್ಯ ವಿವಿ ನಿವೃತ್ತ ಅಧಿಕಾರಿ ವೀರಭದ್ರಪ್ಪ ಉಪ್ಪಿನ, ಗಾಯಕ ರಾಜೇಶ್ ಕುಲಕರ್ಣಿ, ಹಿರಿಯ ಪತ್ರಕರ್ತ ಅಪ್ಪಾರಾವ್ ಸೌದಿ, ಕಲಾವಿದ ಯೇಸುದಾಸ್ ಅಲಿಯಂಬುರೆ, ಅಜಯ್ ಯೇಸುದಾಸ್ ಮತ್ತಿತರು ಇದ್ದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಕವನ : ಸಮರದ ಮಾತು

ಸಮರದ ಮಾತು ಅದೆಷ್ಟು ಇವೆ ನಿನ್ನ ಮಾತಿನ ಸಮರದ ಬಾಣಗಳು ಎದೆಯ ಗುಂಡಿಗೆಯನು ಸೀಳಿ ನಿಂತಿವೆವೀರ ಪರಾಕ್ರಮದ ಕೂಸೂ ನಾನಲ್ಲ ನಿನ್ನ ಜೊತೆ ಹೋರಾಡಿ ಜಯಿಸುವ ಶಕ್ತಿಯೂ ನನ್ನಲಿಲ್ಲ ಏಕೆಂದರೆಆ ಶಕ್ತಿ ಎಲ್ಲವನ್ನೂ ಕಿತ್ತು ಕೊಂಡ ವೀರ ಯೋಧ ಮಾತಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group