- Advertisement -
ಕಿತ್ತೂರಿನ ಕಲಿಯಿವಳು
ಕಿತ್ತೂರಿನ ಕಲಿಯಿವಳು ಕತ್ತಿಯನು ಹಿಡಿದವಳು
ಸುತ್ತೇಳು ನಾಡಿನೊಳು ಹೆಸರಾದವಳು
ಉತ್ತುವರು ನಾವುಗಳು ಬಿತ್ತುವರು ನಾವಿರಲು
ಮತ್ತೇತಕೆ ಕಪ್ಪವದು ಎಂದವಳು//ಪ
ಮಲ್ಲಸರ್ಜನ ಮಡದಿ ಬಿಲ್ವಿದ್ಯೆ ಕಲಿತವಳು
ಭಲ್ಲೆಯಲಿ ಗುರಿಯಿಟ್ಟು ಹೊಡೆದವಳು
ಕ್ಷುಲ್ಲತನದಾಂಗ್ಲರ ಸೊಲ್ಲನಡಗಿಸಿದಂತ
ಬಲ್ಲಿದನು ರಾಯಣ್ಣನ ರಾಜಮಾತೆ//1
ಮಕ್ಕಳನು ಹೊಂದಿರದೆ ಕಕ್ಕುಲತೆ ಹೊಂದುತಲಿ
ತಕ್ಕಮಗು ದತ್ತಕ್ಕೆ ಪಡೆದಂತವಳು
ಹಕ್ಕದುವೆ ಇಲ್ಲವೆನೊ ದತ್ತುಮಕ್ಕಳಿಗೆಂಬ
ಸೊಕ್ಕಿನ ಥ್ಯಾಕರೆಯನೆದುರಿಸಿದಳು//2
- Advertisement -
ಕನ್ನಡದ ನಾಡಿನೊಳು ಕುನ್ನಿಗಳು ಆಂಗ್ಲರಿಗೆ
ಮನ್ನಣೆಯ ಕೊಡದಿರುತ ಪ್ರತಿಭಟಿಸಿ
ತನ್ನತನ ಮರೆಯದೆ ಕನ್ನಡದ ನೆಲಕಾಗಿ
ಚೆನ್ನಮ್ಮ ಪ್ರಾಣವ ತೆತ್ತಿಹಳು//3
ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತ್ಯುತ್ಸವದ
ಶುಭಾಶಯಗಳು
- Advertisement -
ಶ್ರೀಮತಿ ಬಸಮ್ಮ ಏಗನಗೌಡ್ರ
ಶಿಕ್ಷಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚವಢಾಳ
ತಾ ಸವಣೂರು ಜಿ ಹಾವೇರಿ