ಕಿತ್ತೂರು ಉತ್ಸವದ ನಿಮಿತ್ತ ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Must Read

ಬೈಲಹೊಂಗಲ: ಗ್ಲೋಬಲ್ ವುಮೇನ್ರೈಸ್ ಫೌಂಡೇಶನ್ ಬೆಂಗಳೂರು ಇವರ ವತಿಯಿಂದ ಕಿತ್ತೂರು ಉತ್ಸವದ ನಿಮಿತ್ತ ಚೆನ್ನಮ್ಮಾಜಿಯವರ ಐಕ್ಯ ಸ್ಥಳವಾದ ಬೈಲಹೊಂಗಲದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಆಯೋಜಿಸಲಾಗಿದೆ.

ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ವೀರರಾಣಿ ಕಿತ್ತೂರು‌ ಚನ್ನಮ್ಮ, ಸ್ವಾತಂತ್ರ್ಯ ಹೋರಾಟಗಾರರು, ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಪರಿಸರ ಪ್ರೇಮ, ರಾಷ್ಟ್ರಪ್ರೇಮ, ಮಾನವೀಯ ಮೌಲ್ಯಗಳು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಕವನಗಳನ್ನು ಆಹ್ವಾನಿಸಲಾಗಿದೆ.

ಕವನ 30 ಸಾಲುಗಳಿಗೆ ಮಿಕ್ಕದಂತೆ ಕಾಗದದ ಒಂದೇ ಮಗ್ಗುಲಲ್ಲಿ ಬರೆದು ಅಥವಾ ಡಿಟಿಪಿ ಮಾಡಿಸಿ ಸ್ವವಿಳಾಸ, ಕಿರುಪರಿಚಯ, ಭಾವಚಿತ್ರ, ವಾಟ್ಸಪ್ ಮೊಬೈಲ್ ಸಂಖ್ಯೆಯೊಂದಿಗೆ ಸೆಪ್ಟೆಂಬರ್ 25ರ ಒಳಗಾಗಿ ಶ್ರೀ ಮೋಹನ ಬಸನಗೌಡ ಪಾಟೀಲ, ಮಾಜಿ ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, “ಬಸವ ನಿವಾಸ”, ಚನ್ನಮ್ಮನಗರ ಮೊದಲನೆಯ ಅಡ್ಡರಸ್ತೆ, ಬೈಲಹೊಂಗಲ- 591102, ಬೆಳಗಾವಿ ಜಿಲ್ಲೆ ಈ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9448920888 ಸಂಪರ್ಕಿಸಬೇಕೆಂದು ಗ್ಲೋಬಲ್ ವುಮೇನ್ರೈಸ್ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಡಾ. ಮನ್ಮತಯ್ಯ ಸ್ವಾಮಿ, ಕಾರ್ಯದರ್ಶಿ ಮಿಥುನ ವಿಠ್ಠಲ ಹುಗ್ಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕರವೇ ಎಂಬುದು ಕನ್ನಡಿಗರ ಆತ್ಮಶಕ್ತಿ

ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಹುಟ್ಟಿದ್ದು ಕನ್ನಡ ಭಾಷೆಗೆ, ಕನ್ನಡಿಗರಿಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ ಯುವ ಸಮೂಹದ ಪ್ರತಿಭಟನೆಯಿಂದ. ಅನೇಕ ಸಂಘಟನೆಗಳ ಮುಖಂಡರೊಂದಿಗೆ ಸೇರಿ ಕರವೇ...

More Articles Like This

error: Content is protected !!
Join WhatsApp Group