ಕೇಜ್ರಿವಾಲ್ ರಾಜೀನಾಮೆ ನೀಡುತ್ತಾರಂತೆ !

Must Read

ಹೊಸದೆಹಲಿ – ಸಾರಾಯಿ ಹಗರಣದಿಂದ ಜೈಲು ಕಂಬಿ ಎಣಿಸುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜಾಮೀನು ಸಿಗುತ್ತಲೇ ಹೊರಗೆ ಬಂದು ರವಿವಾರ ತಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಆಪ್ ಪಕ್ಷದ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬರುವ ನವೆಂಬರ್ ನಲ್ಲಿ ಮಹಾರಾಷ್ಟ್ರದ ಜೊತೆ ದೆಹಲಿಗೂ ವಿಧಾನ ಸಭಾ ಚುನಾವಣೆ ನಡೆಯಬೇಕು ಎಂದರಲ್ಲದೆ ಜನತೆ ತಮಗೆ ಪ್ರಾಮಾಣಿಕತೆಯ ಸರ್ಟಿಫಿಕೇಟ್ ನೀಡಿದರೆ ಮಾತ್ರ ತಾನು ಮುಖ್ಯಮಂತ್ರಿ ಗದ್ದುಗೆಯಲ್ಲಿ ಕೂರುವುದಾಗಿ ಹೇಳಿದರು.

ಕೇಜ್ರಿವಾಲರ ಈ ಹೇಳಿಕೆಯನ್ನು ಕಾಂಗ್ರೆಸ್ ಟೀಕಿಸಿದ್ದು ಇದೊಂದು ಡ್ರಾಮಾ ಎಂದಿದೆ. ಇದೇ ನಿರ್ಧಾರವನ್ನು ಕೇಜ್ರಿವಾಲ್ ಆರು ತಿಂಗಳ ಹಿಂದೆಯೇ ಕೈಗೊಂಡಿದ್ದರೆ ಅವರ ಪ್ರಾಮಾಣಿಕತೆಯ ಸಾಬೀತಾಗುತ್ತಿತ್ತು ಎಂದು ತಿಳಿಸಿದೆ.

ರಾಜೀನಾಮೆಯ ವಿಷಯದ ಬಗ್ಗೆ ಭಾರತೀಯ ಜನತಾ ಪಕ್ಷ ಕೂಡ ವ್ಯಂಗ್ಯಭರಿತ ಪ್ರತಿಕ್ರಿಯೆ ನೀಡಿದೆ. ಇದರ ಹಿಂದೆ ಏನೋ ಪಿತೂರಿ ಇದೆ ಎಂಬ ಸಂದೇಹ ವ್ಯಕ್ತವಾಗಿದೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group