ಕಮಲ ಬಿಟ್ಟು ತೆನೆ ಹಿಡಿದ ಖೂಬಾ

Must Read

ಬೀದರ: ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಕಾರಣದಿಂದ ಬಸವಕಲ್ಯಾಣದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮತ್ತೆ ಜೆಡಿಎಸ್ ಪಕ್ಷದತ್ತ ವಾಲಿದ್ದಾರೆ.

ಈ ಮುಂಚೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾತು ಕೇಳಿ ಬಿಜೆಪಿ ಸೇರಿದ್ದರು ಆದರೆ ಅಸಮಾಧಾನದಿಂದಾಗಿ ಕಮಲದ ಹೂವು ಕೆಳಗೆ ಇಳಿಸಿ ಜೆಡಿಎಸ್ ನ ತೆನೆ ಕಡೆ ಮುಖ ಮಾಡಿದ್ದಾರೆ.

ಚನ್ನಪಟ್ಟಣಕ್ಕೆ ತೆರಳಿ  ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಮಲ್ಲಿಕಾರ್ಜುನ ಖೂಬಾ ಅವರಿಗೆ ಶಾಲು ಹೊದಿಸಿ ಜೆಡಿಎಸ್ ಸೇರುವ ತಮ್ಮ ಇಂಗಿತ ವ್ಯಕ್ತಪಡಿಸಿದರು

ಬಸವಕಲ್ಯಾಣದಿಂದ ಮತ್ತೆ ತೆನೆ ಹೊತ್ತ ಮಹಿಳೆ ಚಿನ್ಹೆಯಿಂದ ಮಲ್ಲಿಕಾರ್ಜುನ ಖೂಬಾ ಸ್ಪರ್ಧಿಸಲು ಕುಮಾರಸ್ವಾಮಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ...

More Articles Like This

error: Content is protected !!
Join WhatsApp Group